ಮಹಾಗಣಪತಿ, ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಭಕ್ತರಿಗೆ ಅನುಮತಿನಿರಾಕರಿಸಲಾಗಿತ್ತು. ದರ್ಶನ ಪಡೆಯಲು ಮಾತ್ರ ಅವಕಾಶ ನೀಡಲಾಗಿತ್ತು. ಅನೇಕ ಜನ ಸಮುದ್ರ ದಂಡೆಯ ಮೇಲೆ ಕುಳಿತು ಗ್ರಹಣ ಬಿಡುವ ತನಕ ಜಪ, ಧ್ಯಾನ ಮಾಡಿದ್ದು ಕಂಡುಬಂತು. ಗ್ರಹಣವು ಭಾನುವಾರ ಆದ ಕಾರಣ ‘ಚೂಡಾಮಣಿ’ ಎಂದೂ ಕರೆಯಲಾಗುತ್ತದೆ ಎಂದು ಧಾರ್ಮಿಕ ಮುಖಂಡರು ತಿಳಿಸಿದರು.