ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲೇಕಲ್‌ನಲ್ಲಿ ಘನತ್ಯಾಜ್ಯ ಘಟಕ

ನಗರ ಮಾದರಿಯಲ್ಲೇ ಮನೆ–ಮನೆಯಿಂದ ಕಸ ಸಂಗ್ರಹ
Last Updated 4 ಆಗಸ್ಟ್ 2020, 11:41 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಹುಲೇಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮಂಗಳವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು. ತಾಲ್ಲೂಕಿನ ಗ್ರಾಮೀಣ ಭಾಗದ ಮೊದಲ ಘಟಕ ಇದಾಗಿದೆ.

ರಾಜ್ಯ ಸರ್ಕಾರ ನೀಡಿರುವ ₹ 10 ಲಕ್ಷ, ಗ್ರಾಮ ಪಂಚಾಯ್ತಿಯ ₹ 2 ಲಕ್ಷ ಅನುದಾನದಲ್ಲಿ ಘಟಕ ನಿರ್ಮಾಣವಾಗಿದೆ. ನಗರದಲ್ಲಿ ಮನೆ–ಮನೆ ಕಸ ಸಂಗ್ರಹಿಸಿದ ಮಾದರಿಯಲ್ಲೇ ಹಳ್ಳಿಮನೆಗಳಿಂದ ಪಂಚಾಯ್ತಿಯ ಒಣ ಕಸವನ್ನು ಮಾತ್ರ ಸಂಗ್ರಹಿಸುತ್ತದೆ. ಇವುಗಳ ಮರುಬಳಕೆ ಹಾಗೂ ಅವುಗಳಿಂದ ಆದಾಯ ಸಂಗ್ರಹಿಸಲು ಪಂಚಾಯ್ತಿ ಯೋಜನೆ ರೂಪಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕಾಗೇರಿ, ‘ಇದು ಒಟ್ಟು ₹ 20 ಲಕ್ಷದ ಯೋಜನೆಯಾಗಿದೆ. ಈಗಾಗಲೇ ₹ 12 ಲಕ್ಷ ವೆಚ್ಚ ಮಾಡಲಾಗಿದೆ. ಬಾಕಿಯಿರುವ ₹ 8 ಲಕ್ಷ ಅನುದಾನವನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ತ್ಯಾಜ್ಯಗಳು ಹೆಚ್ಚುತ್ತಿರುವ ಕಾರಣ ಈ ಘಟಕ ಸ್ಥಾಪಿಸಲಾಗಿದೆ. ಗ್ರಾಮೀಣ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ನಗರ ಪ್ರದೇಶದಂತೆ ಮನೆ ಬಾಗಿಲಿಗೆ ಕಸ ಸಂಗ್ರಹ ವಾಹನ ಬರುತ್ತದೆ. ₹ 6 ಲಕ್ಷ ವೆಚ್ಚದಲ್ಲಿ ಹೊಸ ವಾಹನ ಖರೀದಿಸಲು ಯೋಜನೆ ಸಿದ್ಧವಾಗಿದೆ. ಸದ್ಯಕ್ಕೆ ಬಾಡಿಗೆ ವಾಹನ ಈ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.

ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಪಿಡಿಒ ಹರ್ಷ ರಾಥೋಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT