<p><strong>ಶಿರಸಿ: </strong>ತಾಲ್ಲೂಕಿನ ಹುಲೇಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮಂಗಳವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು. ತಾಲ್ಲೂಕಿನ ಗ್ರಾಮೀಣ ಭಾಗದ ಮೊದಲ ಘಟಕ ಇದಾಗಿದೆ.</p>.<p>ರಾಜ್ಯ ಸರ್ಕಾರ ನೀಡಿರುವ ₹ 10 ಲಕ್ಷ, ಗ್ರಾಮ ಪಂಚಾಯ್ತಿಯ ₹ 2 ಲಕ್ಷ ಅನುದಾನದಲ್ಲಿ ಘಟಕ ನಿರ್ಮಾಣವಾಗಿದೆ. ನಗರದಲ್ಲಿ ಮನೆ–ಮನೆ ಕಸ ಸಂಗ್ರಹಿಸಿದ ಮಾದರಿಯಲ್ಲೇ ಹಳ್ಳಿಮನೆಗಳಿಂದ ಪಂಚಾಯ್ತಿಯ ಒಣ ಕಸವನ್ನು ಮಾತ್ರ ಸಂಗ್ರಹಿಸುತ್ತದೆ. ಇವುಗಳ ಮರುಬಳಕೆ ಹಾಗೂ ಅವುಗಳಿಂದ ಆದಾಯ ಸಂಗ್ರಹಿಸಲು ಪಂಚಾಯ್ತಿ ಯೋಜನೆ ರೂಪಿಸಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಕಾಗೇರಿ, ‘ಇದು ಒಟ್ಟು ₹ 20 ಲಕ್ಷದ ಯೋಜನೆಯಾಗಿದೆ. ಈಗಾಗಲೇ ₹ 12 ಲಕ್ಷ ವೆಚ್ಚ ಮಾಡಲಾಗಿದೆ. ಬಾಕಿಯಿರುವ ₹ 8 ಲಕ್ಷ ಅನುದಾನವನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ತ್ಯಾಜ್ಯಗಳು ಹೆಚ್ಚುತ್ತಿರುವ ಕಾರಣ ಈ ಘಟಕ ಸ್ಥಾಪಿಸಲಾಗಿದೆ. ಗ್ರಾಮೀಣ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ನಗರ ಪ್ರದೇಶದಂತೆ ಮನೆ ಬಾಗಿಲಿಗೆ ಕಸ ಸಂಗ್ರಹ ವಾಹನ ಬರುತ್ತದೆ. ₹ 6 ಲಕ್ಷ ವೆಚ್ಚದಲ್ಲಿ ಹೊಸ ವಾಹನ ಖರೀದಿಸಲು ಯೋಜನೆ ಸಿದ್ಧವಾಗಿದೆ. ಸದ್ಯಕ್ಕೆ ಬಾಡಿಗೆ ವಾಹನ ಈ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.</p>.<p>ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಪಿಡಿಒ ಹರ್ಷ ರಾಥೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ತಾಲ್ಲೂಕಿನ ಹುಲೇಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮಂಗಳವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು. ತಾಲ್ಲೂಕಿನ ಗ್ರಾಮೀಣ ಭಾಗದ ಮೊದಲ ಘಟಕ ಇದಾಗಿದೆ.</p>.<p>ರಾಜ್ಯ ಸರ್ಕಾರ ನೀಡಿರುವ ₹ 10 ಲಕ್ಷ, ಗ್ರಾಮ ಪಂಚಾಯ್ತಿಯ ₹ 2 ಲಕ್ಷ ಅನುದಾನದಲ್ಲಿ ಘಟಕ ನಿರ್ಮಾಣವಾಗಿದೆ. ನಗರದಲ್ಲಿ ಮನೆ–ಮನೆ ಕಸ ಸಂಗ್ರಹಿಸಿದ ಮಾದರಿಯಲ್ಲೇ ಹಳ್ಳಿಮನೆಗಳಿಂದ ಪಂಚಾಯ್ತಿಯ ಒಣ ಕಸವನ್ನು ಮಾತ್ರ ಸಂಗ್ರಹಿಸುತ್ತದೆ. ಇವುಗಳ ಮರುಬಳಕೆ ಹಾಗೂ ಅವುಗಳಿಂದ ಆದಾಯ ಸಂಗ್ರಹಿಸಲು ಪಂಚಾಯ್ತಿ ಯೋಜನೆ ರೂಪಿಸಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಕಾಗೇರಿ, ‘ಇದು ಒಟ್ಟು ₹ 20 ಲಕ್ಷದ ಯೋಜನೆಯಾಗಿದೆ. ಈಗಾಗಲೇ ₹ 12 ಲಕ್ಷ ವೆಚ್ಚ ಮಾಡಲಾಗಿದೆ. ಬಾಕಿಯಿರುವ ₹ 8 ಲಕ್ಷ ಅನುದಾನವನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ತ್ಯಾಜ್ಯಗಳು ಹೆಚ್ಚುತ್ತಿರುವ ಕಾರಣ ಈ ಘಟಕ ಸ್ಥಾಪಿಸಲಾಗಿದೆ. ಗ್ರಾಮೀಣ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ನಗರ ಪ್ರದೇಶದಂತೆ ಮನೆ ಬಾಗಿಲಿಗೆ ಕಸ ಸಂಗ್ರಹ ವಾಹನ ಬರುತ್ತದೆ. ₹ 6 ಲಕ್ಷ ವೆಚ್ಚದಲ್ಲಿ ಹೊಸ ವಾಹನ ಖರೀದಿಸಲು ಯೋಜನೆ ಸಿದ್ಧವಾಗಿದೆ. ಸದ್ಯಕ್ಕೆ ಬಾಡಿಗೆ ವಾಹನ ಈ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.</p>.<p>ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಪಿಡಿಒ ಹರ್ಷ ರಾಥೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>