ಮಲಿನಗೊಂಡಿರುವ ಕಾಲೇಜಿನ ಆವರಣ, ತರಗತಿ ಕೊಠಡಿಗಳು, ಅವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ‘ಪ್ರಾಚಾರ್ಯರು, ಪ್ರಾಧ್ಯಾಪಕರ ನಡುವೆ ಹೊಂದಾಣಿಕೆಯಿಲ್ಲ. ಕೆಲಸ ಮಾಡಲು ಆಸಕ್ತಿ ಇಲ್ಲದಿದ್ದರೆ ಹೊರ ಹೋಗಬಹುದು. ಬೋಧಕರ ನಡುವಿನ ಒಳ ಜಗಳ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರಬಾರದು. ಇಂಥ ವಾತಾವರಣ ಸರಿಪಡಿಸಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದರು.