<p>ಶಿರಸಿ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸುವ ಜತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ತಾಲ್ಲೂಕಿನ ಸಾಲ್ಕಣಿ, ಮೇಲಿನ ಓಣಿಕೇರಿ, ಹುಲೇಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗಳವಾರ ₹4.72 ಕೋಟಿ ವೆಚ್ಚದಲ್ಲಿ ಕೈಗೊಂಡ ಸೇತುವೆ, ಅಂಗನವಾಡಿ ಕಟ್ಟಡ, ಬಾಂದಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅವರು ಚಾಲನೆ ನೀಡಿದರು.</p>.<p>‘ಮಣದೂರು ಗ್ರಾಮದಲ್ಲಿ ಹಾದುಹೋದ ರಾಜ್ಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಮಸ್ಯೆ ಉಂಟಾಗುತ್ತಿದ್ದ ಕಾರಣ ಅಲ್ಲಿ ಅಂತರ್ಗತ ಚರಂಡಿ ಸಹಿತ ಸೇತುವೆ ನಿರ್ಮಿಸಲಾಗಿದೆ. ಇದು ಸ್ಥಳೀಯರಿಗಷ್ಟೆ ಅಲ್ಲದೆ ವಾಹನ ಸವಾರರಿಗೆ ಅನುಕೂಲವಾಗಿದೆ’ ಎಂದರು.</p>.<p>‘ಪ್ರವಾಸಿತಾಣಗಳಲ್ಲಿ ಮೂಲಸೌಕರ್ಯ ವೃದ್ಧಿಸುವ ಕೆಲಸವಾಗುತ್ತಿದೆ. ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಪರಿಕರಗಳನ್ನೂ ಒದಗಿಸಲಾಗುತ್ತಿದೆ’ ಎಂದರು.</p>.<p>‘ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಈ ಹಿಂದೆ ಹೇಳಿಕೆಯಲ್ಲಿ ಕಾಲಕಳೆಯುತ್ತಿದ್ದರು. ನಾನು ಕೆಲಸದಲ್ಲಿ ಮಾಡಿ ತೋರಿಸಿದ್ದೇನೆ. ಜನರ ಬೇಡಿಕೆಗೆ ತಕ್ಕಂತೆ ಅನುದಾನ ಒದಗಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ಒದಗಿಸಿಕೊಡಲಾಗಿದೆ’ ಎಂದು ಕಾಗೇರಿ ಹೇಳಿದರು.</p>.<p>ಪ್ರಮುಖರಾದ ಜಿ.ಎನ್.ಹೆಗಡೆ ಮುರೇಗಾರ, ನರಸಿಂಹ ಹೆಗಡೆ ಬಕ್ಕಳ, ಎನ್.ಎಸ್.ಭಟ್ ಮಣದೂರು, ಪಿಡಬ್ಲ್ಯುಡಿ ಇಇ ಕೃಷ್ಣಾ ರೆಡ್ಡಿ, ಎಇಇ ಉಮೇಶ ನಾಯ್ಕ, ಶಿಶು ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಭಟ್, ಪಿ.ಆರ್.ಇ.ಡಿ. ಎಇಇ ರಮಚಂದ್ರ ಗಾಂವಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸುವ ಜತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ತಾಲ್ಲೂಕಿನ ಸಾಲ್ಕಣಿ, ಮೇಲಿನ ಓಣಿಕೇರಿ, ಹುಲೇಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗಳವಾರ ₹4.72 ಕೋಟಿ ವೆಚ್ಚದಲ್ಲಿ ಕೈಗೊಂಡ ಸೇತುವೆ, ಅಂಗನವಾಡಿ ಕಟ್ಟಡ, ಬಾಂದಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅವರು ಚಾಲನೆ ನೀಡಿದರು.</p>.<p>‘ಮಣದೂರು ಗ್ರಾಮದಲ್ಲಿ ಹಾದುಹೋದ ರಾಜ್ಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಮಸ್ಯೆ ಉಂಟಾಗುತ್ತಿದ್ದ ಕಾರಣ ಅಲ್ಲಿ ಅಂತರ್ಗತ ಚರಂಡಿ ಸಹಿತ ಸೇತುವೆ ನಿರ್ಮಿಸಲಾಗಿದೆ. ಇದು ಸ್ಥಳೀಯರಿಗಷ್ಟೆ ಅಲ್ಲದೆ ವಾಹನ ಸವಾರರಿಗೆ ಅನುಕೂಲವಾಗಿದೆ’ ಎಂದರು.</p>.<p>‘ಪ್ರವಾಸಿತಾಣಗಳಲ್ಲಿ ಮೂಲಸೌಕರ್ಯ ವೃದ್ಧಿಸುವ ಕೆಲಸವಾಗುತ್ತಿದೆ. ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಪರಿಕರಗಳನ್ನೂ ಒದಗಿಸಲಾಗುತ್ತಿದೆ’ ಎಂದರು.</p>.<p>‘ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಈ ಹಿಂದೆ ಹೇಳಿಕೆಯಲ್ಲಿ ಕಾಲಕಳೆಯುತ್ತಿದ್ದರು. ನಾನು ಕೆಲಸದಲ್ಲಿ ಮಾಡಿ ತೋರಿಸಿದ್ದೇನೆ. ಜನರ ಬೇಡಿಕೆಗೆ ತಕ್ಕಂತೆ ಅನುದಾನ ಒದಗಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ಒದಗಿಸಿಕೊಡಲಾಗಿದೆ’ ಎಂದು ಕಾಗೇರಿ ಹೇಳಿದರು.</p>.<p>ಪ್ರಮುಖರಾದ ಜಿ.ಎನ್.ಹೆಗಡೆ ಮುರೇಗಾರ, ನರಸಿಂಹ ಹೆಗಡೆ ಬಕ್ಕಳ, ಎನ್.ಎಸ್.ಭಟ್ ಮಣದೂರು, ಪಿಡಬ್ಲ್ಯುಡಿ ಇಇ ಕೃಷ್ಣಾ ರೆಡ್ಡಿ, ಎಇಇ ಉಮೇಶ ನಾಯ್ಕ, ಶಿಶು ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಭಟ್, ಪಿ.ಆರ್.ಇ.ಡಿ. ಎಇಇ ರಮಚಂದ್ರ ಗಾಂವಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>