<p><strong>ಶಿರಸಿ: </strong>ಮಳೆಯಿಂದ ಈ ಬಾರಿ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿದ್ದು, ಹೆಚ್ಚಿನ ಪರಿಹಾರಕ್ಕೆ ಸರ್ಕಾರಕ್ಕೆ ವಿಶೇಷ ಪ್ರಸ್ತಾವ ಸಲ್ಲಿಸಲಾಗುವುದ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.</p>.<p>ತಾಲ್ಲೂಕಿನ ಮತ್ತಿಘಟ್ಟ, ಮಾಡಮನೆ, ಕೆಳಗಿನಕೇರಿ, ರೇವಣಕಟ್ಟಾದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯನ್ನು ಮಂಗಳವಾರ ಪರಿಶೀಲಿಸಿದ ಅವರು, ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.</p>.<p>‘ಹಾನಿಯಾದ ಬೆಳೆಗೆ ಈಗಾಗೆಲ ಪರಿಹಾರ ವಿತರಿಸಲಾಗುತ್ತಿದೆ. ರೈತರು ಕಳೆದುಕೊಂಡಿರುವ ಕೃಷಿಭೂಮಿಗೆ ನೀಡುವ ಪರಿಹಾರ ಸಾಲದು ಎಂಬ ದೂರು ಬಂದಿದೆ. ಹೀಗಾಗಿ ಅವುಗಳಿಗೆ ವಿಶೇಷ ಪರಿಹಾರಕ್ಕೆ ಸರ್ಕಾರದ ಮುಂದೆ ಬೇಡಿಕೆ ಇಡಲಾಗುತ್ತಿದೆ’ ಎಂದರು.</p>.<p>‘ಮುಂಗಾರು ಅವಧಿಯಲ್ಲಿ ಉತ್ತರ ಕನ್ನಡದಲ್ಲಿ ರಸ್ತೆ ಸಂಪರ್ಕ ಕಡಿತಗೊಳ್ಳುವದು ಸಾಮಾನ್ಯವಾಗಿತ್ತು. ಆದರೆ, ಈ ಬಾರಿ ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಪ್ರಮುಖ ಮಾರ್ಗಗಳಲ್ಲಿ ಸಂಚಾರ ಕಷ್ಟವಾಗಿದೆ. ಅದನ್ನು ಸರಿಪಡಿಸಲು ತುರ್ತು ಕ್ರಮವಹಿಸಲಾಗುತ್ತಿದೆ’ ಎಂದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳನ್ನು ತುರ್ತು ದುರಸ್ಥಿಪಡಿಸಲು ಲೋಕೋಪಯೋಗಿ ಇಲಾಖೆ, ಪಂಚಾಯತರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೂಚಿಸಲಾಗಿದೆ. ಹಂತ ಹಂತವಾಗಿ ರಸ್ತೆ ಸುಧಾರಣೆಗೊಳಿಸಲು ನರೇಗಾ, ಗ್ರಾಮ ಪಂಚಾಯ್ತಿ ಹಣಕಾಸು ಅನುದಾನ ಬಳಕೆಗೆ ನಿರ್ಧರಿಸಲಾಗುವುದು’ ಎಂದರು.</p>.<p>ಮಳೆಗೆ ಕುಸಿದ ಕೆಳಗಿನಕೇರಿಯ ಚಂದ್ರಶೇಖರ ಹೆಗಡೆ ಅವರ ಅಡಿಕೆ ತೋಟವನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು. ರೇವಣಕಟ್ಟಾ ಗ್ರಾಮದಲ್ಲಿ ಕುಸಿದು ಬಿದ್ದ ಮನೆಗಳನ್ನು ಪರಿಶೀಲಿಸಿದರು. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p>.<p>ಸಿದ್ಧಿ ಸಮುದಾಯದವರು ಹೆಚ್ಚಿರುವ ಮಾಡಮನೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಸುಧಾರಣೆಗೊಳಿಸುವಂತೆ ಸ್ಥಳೀಯರು ಮನವಿ ಸಲ್ಲಿಸಿದರು. ಸಂಪೂರ್ಣ ನಾಶವಾಗಿರುವ ತೋಟಕ್ಕೆ ಪರ್ಯಾಯ ಭೂಮಿ ಒದಗಿಸುವಂತೆ ಕೆಳಗಿನಕೇರಿಯ ಮಧುಸೂದನ ಹೆಗಡೆ, ಚಂದ್ರಶೇಖರ ಹೆಗಡೆ ಮನವಿ ಸಲ್ಲಿಸಿದರು.</p>.<p>ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್, ದೇವನಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಧುಮತಿ ನಾಯ್ಕ, ಸದಸ್ಯರಾದ ಜಯಭಾರತಿ ಭಟ್ಟ, ನಾರಾಯಣ ಹೆಗಡೆ, ಪ್ರಮುಖರಾದ ಗೋಪಾಲಕೃಷ್ಣ ವೈದ್ಯ, ಪಿಡಿಒ ಮಾಧವಿ ಕಾಮತ, ಮಮತಾ ಗುಡ್ಡದಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಮಳೆಯಿಂದ ಈ ಬಾರಿ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿದ್ದು, ಹೆಚ್ಚಿನ ಪರಿಹಾರಕ್ಕೆ ಸರ್ಕಾರಕ್ಕೆ ವಿಶೇಷ ಪ್ರಸ್ತಾವ ಸಲ್ಲಿಸಲಾಗುವುದ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.</p>.<p>ತಾಲ್ಲೂಕಿನ ಮತ್ತಿಘಟ್ಟ, ಮಾಡಮನೆ, ಕೆಳಗಿನಕೇರಿ, ರೇವಣಕಟ್ಟಾದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯನ್ನು ಮಂಗಳವಾರ ಪರಿಶೀಲಿಸಿದ ಅವರು, ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.</p>.<p>‘ಹಾನಿಯಾದ ಬೆಳೆಗೆ ಈಗಾಗೆಲ ಪರಿಹಾರ ವಿತರಿಸಲಾಗುತ್ತಿದೆ. ರೈತರು ಕಳೆದುಕೊಂಡಿರುವ ಕೃಷಿಭೂಮಿಗೆ ನೀಡುವ ಪರಿಹಾರ ಸಾಲದು ಎಂಬ ದೂರು ಬಂದಿದೆ. ಹೀಗಾಗಿ ಅವುಗಳಿಗೆ ವಿಶೇಷ ಪರಿಹಾರಕ್ಕೆ ಸರ್ಕಾರದ ಮುಂದೆ ಬೇಡಿಕೆ ಇಡಲಾಗುತ್ತಿದೆ’ ಎಂದರು.</p>.<p>‘ಮುಂಗಾರು ಅವಧಿಯಲ್ಲಿ ಉತ್ತರ ಕನ್ನಡದಲ್ಲಿ ರಸ್ತೆ ಸಂಪರ್ಕ ಕಡಿತಗೊಳ್ಳುವದು ಸಾಮಾನ್ಯವಾಗಿತ್ತು. ಆದರೆ, ಈ ಬಾರಿ ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಪ್ರಮುಖ ಮಾರ್ಗಗಳಲ್ಲಿ ಸಂಚಾರ ಕಷ್ಟವಾಗಿದೆ. ಅದನ್ನು ಸರಿಪಡಿಸಲು ತುರ್ತು ಕ್ರಮವಹಿಸಲಾಗುತ್ತಿದೆ’ ಎಂದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳನ್ನು ತುರ್ತು ದುರಸ್ಥಿಪಡಿಸಲು ಲೋಕೋಪಯೋಗಿ ಇಲಾಖೆ, ಪಂಚಾಯತರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೂಚಿಸಲಾಗಿದೆ. ಹಂತ ಹಂತವಾಗಿ ರಸ್ತೆ ಸುಧಾರಣೆಗೊಳಿಸಲು ನರೇಗಾ, ಗ್ರಾಮ ಪಂಚಾಯ್ತಿ ಹಣಕಾಸು ಅನುದಾನ ಬಳಕೆಗೆ ನಿರ್ಧರಿಸಲಾಗುವುದು’ ಎಂದರು.</p>.<p>ಮಳೆಗೆ ಕುಸಿದ ಕೆಳಗಿನಕೇರಿಯ ಚಂದ್ರಶೇಖರ ಹೆಗಡೆ ಅವರ ಅಡಿಕೆ ತೋಟವನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು. ರೇವಣಕಟ್ಟಾ ಗ್ರಾಮದಲ್ಲಿ ಕುಸಿದು ಬಿದ್ದ ಮನೆಗಳನ್ನು ಪರಿಶೀಲಿಸಿದರು. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p>.<p>ಸಿದ್ಧಿ ಸಮುದಾಯದವರು ಹೆಚ್ಚಿರುವ ಮಾಡಮನೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಸುಧಾರಣೆಗೊಳಿಸುವಂತೆ ಸ್ಥಳೀಯರು ಮನವಿ ಸಲ್ಲಿಸಿದರು. ಸಂಪೂರ್ಣ ನಾಶವಾಗಿರುವ ತೋಟಕ್ಕೆ ಪರ್ಯಾಯ ಭೂಮಿ ಒದಗಿಸುವಂತೆ ಕೆಳಗಿನಕೇರಿಯ ಮಧುಸೂದನ ಹೆಗಡೆ, ಚಂದ್ರಶೇಖರ ಹೆಗಡೆ ಮನವಿ ಸಲ್ಲಿಸಿದರು.</p>.<p>ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್, ದೇವನಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಧುಮತಿ ನಾಯ್ಕ, ಸದಸ್ಯರಾದ ಜಯಭಾರತಿ ಭಟ್ಟ, ನಾರಾಯಣ ಹೆಗಡೆ, ಪ್ರಮುಖರಾದ ಗೋಪಾಲಕೃಷ್ಣ ವೈದ್ಯ, ಪಿಡಿಒ ಮಾಧವಿ ಕಾಮತ, ಮಮತಾ ಗುಡ್ಡದಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>