ಶಿರಸಿ: ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಕೇಳುವದೆ ಉನ್ನತ ಖಾತೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಕೆಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡುವ ವೇಳೆ ಹಾಸ್ಯ ಚಟಾಕಿ ಹಾರಿಸಿದ ಅವರು, 'ಜನರ ಎದುರು ನಾವು ಮಣ್ಣಿನ ಮಕ್ಕಳು ಎನ್ನುತ್ತಾರೆ. ಮುಖ್ಯಮಂತ್ರಿ ಎದುರು ಪಿಡಬ್ಲ್ಯೂಡಿ, ನೀರಾವರಿ, ಗೃಹ ಖಾತೆಯ ಬೇಡಿಕೆ ಇಡುತ್ತಾರೆ' ಎಂದರು.
'ಸಹಕಾರ, ಕಾರ್ಮಿಕ, ಕೃಷಿ ಖಾತೆ ಯಾರೂ ಬೇಡಿಕೆ ಇಡುವುದಿಲ್ಲ. ನಾವೆಲ್ಲ ಬೇಡದ ಖಾತೆಯನ್ನು ಪಡೆದು ಒಳ್ಳೆಯ ಕೆಲಸಮಾಡುತ್ತಿದ್ದೇವೆ' ಎಂದರು.