ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಮುಖಂಡ ಸತೀಶ್ ಸೈಲ್, ‘11 ಎಕರೆ ಸರ್ಕಾರಿ ಜಾಗದಲ್ಲಿಅಂತರರಾಷ್ಟ್ರೀಯ ಗುಣಮಟ್ಟದ ಸ್ಟೇಡಿಯಂ ನಿರ್ಮಾಣವಾಗಲಿದೆ. ಕೆಎಸ್ಸಿಎಯನಿಯೋಗವು ಈಗಾಗಲೇ ಸ್ಥಳ ಪರಿಶೀಲನೆ ಮಾಡಿದೆ. ಕಂದಾಯ ಇಲಾಖೆಯಿಂದ ಜಾಗವನ್ನು ಕೆಎಸ್ಸಿಎಗೆ ವಾರ್ಷಿಕ ಬಾಡಿಗೆಯ ಮೇಲೆ ನೀಡಲಾಗುವುದು.ಈ ಬಗ್ಗೆ ಸೂಕ್ತ ಕರಾರು ಪತ್ರವನ್ನು ತಯಾರಿಸಿ ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಲಾಗಿತ್ತು’ ಎಂದು ತಿಳಿಸಿದ್ದಾರೆ.