ಮಳೆ ನಿಂತಿದ್ದರಿಂದ ಹಾಗೂ ಜಲಾಶಯದಿಂದ ಹೊರ ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಕೂಡಲೇ ವಾಹನ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು.ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯವರು ಹೆದ್ದಾರಿಯಲ್ಲಿ ಹಳೆಯ ಪೈಪ್ಗಳನ್ನು ಅಳವಡಿಸಿ ತಾತ್ಕಾಲಿಕ ವ್ಯವಸ್ಥೆಗೆ ಮುಂದಾಗಿದ್ದರು. ಆದರೆ, ಪೈಪ್ಗಳ ಬಾಳಿಕೆ ಬಗ್ಗೆ ಸಂಶಯ ವ್ಯಕ್ತವಾಗಿತ್ತು. ಹಾಗಾಗಿ ಅವುಗಳನ್ನುತೆಗೆದು ಹೊಸ ಪೈಪ್ ಅಳವಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.