<p><strong>ಕಾರವಾರ</strong>: ಹಿರಿಯ ಕಥೆಗಾರ್ತಿ ದಿ.ಜಯಾ ಯಾಜಿ ಶಿರಾಲಿ ಅವರ ಗೌರವಾರ್ಥ, ಕನ್ನಡದ ಕಥೆಗಾರ್ತಿಯರಿಗಾಗಿಯೇ ರಾಜ್ಯಮಟ್ಟದ ಕಥಾ ಸ್ಪಧೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಹಮ್ಮಿಕೊಂಡಿದೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ‘ಕಥಾಸ್ಪರ್ಧೆಯಲ್ಲಿ ಮೊದಲ ಮೂರು ಬಹುಮಾನಗಳಿಗೆ ಕ್ರಮವಾಗಿ ₹ 6,000, ₹ 3,000, ₹ 2,000 ಹಾಗೂ ಮೆಚ್ಚುಗೆ ಬಹುಮಾನ ಪಡೆದ ಇಬ್ಬರಿಗೆ ತಲಾ ₹ 1,000 ಪ್ರದಾನ ಮಾಡಲಾಗುವುದು. ಉತ್ತಮ ಕಥೆ ಬರೆದ ಒಬ್ಬರು ಕಾಲೇಜು ವಿದ್ಯಾರ್ಥಿನಿಗೆ ₹ 2,000 ಬಹುಮಾನ ನೀಡಲಾಗುವುದು. ವಿಜೇತರಿಗೆ ಅಭಿನಂದನಾ ಪತ್ರವನ್ನೂ ವಿತರಿಸಲಾಗುವುದು’ ಎಂದರು.</p>.<p>ಸ್ಪರ್ಧೆಯಲ್ಲಿ ಭಾಗವಹಿಸುವ ಕಾಲೇಜು ವಿದ್ಯಾರ್ಥಿನಿಯರು ಕಥೆಯೊಂದಿಗೆ ಕಾಲೇಜಿನ ಪ್ರಾಂಶುಪಾಲರಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಕಥೆಗಳು 2,500 ಶಬ್ದಗಳಿಗೆ ಮೀರದಂತೆ ಇರಬೇಕು. ಫೆ.23ರ ಒಳಗಾಗಿಕಥೆ ಕಳುಹಿಸಬೇಕು.</p>.<p>ವಿಳಾಸ: ಅರವಿಂದ ಕರ್ಕಿಕೋಡಿ, ಅಧ್ಯಕ್ಷರು, ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ‘ಕನ್ನಡದ ಹಣತೆ’, ಜೆ.ಎಂ.ಎಫ್.ಸಿ. ಕೋರ್ಟ್ ಪಕ್ಕ, ಕೋರ್ಟ್ ರಸ್ತೆ, ಕುಮಟಾ ಅಂಚೆ ಮತ್ತು ತಾಲ್ಲೂಕು (ಉತ್ತರ ಕನ್ನಡ ಜಿಲ್ಲೆ) – 581343.</p>.<p>ನುಡಿ ತಂತ್ರಾಂಶದಲ್ಲಿ ಕಥೆ ಕಳುಹಿಸುವವರು <strong>ಇ-ಮೇಲ್: </strong>kannadadahanate56@gmail.comಗೂ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ವಾಟ್ಸ್ಆ್ಯಪ್ ಸಂಖ್ಯೆ: 96116 50066 ಸಂಪರ್ಕಿಸಬಹುದು.</p>.<p>ಜಯಾ ಅವರಿಗೆ 2020ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಪ್ರಕಟಿಸಿತ್ತು. ತೀವ್ರ ಅನಾರೋಗ್ಯದಿಂದಾಗಿ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಕೆಲವೇ ದಿನಗಳಲ್ಲಿ ಅವರು ನಿಧನರಾದರು. ಅವರ ಕುಟುಂಬದವರ ಅಭಿಪ್ರಾಯದಂತೆ ಪ್ರಶಸ್ತಿಯ ₹ 15 ಸಾವಿರವನ್ನು ಕಥಾ ಸ್ಪರ್ಧೆಯ ವಿಜೇತರಿಗೆ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಹಿರಿಯ ಕಥೆಗಾರ್ತಿ ದಿ.ಜಯಾ ಯಾಜಿ ಶಿರಾಲಿ ಅವರ ಗೌರವಾರ್ಥ, ಕನ್ನಡದ ಕಥೆಗಾರ್ತಿಯರಿಗಾಗಿಯೇ ರಾಜ್ಯಮಟ್ಟದ ಕಥಾ ಸ್ಪಧೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಹಮ್ಮಿಕೊಂಡಿದೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ‘ಕಥಾಸ್ಪರ್ಧೆಯಲ್ಲಿ ಮೊದಲ ಮೂರು ಬಹುಮಾನಗಳಿಗೆ ಕ್ರಮವಾಗಿ ₹ 6,000, ₹ 3,000, ₹ 2,000 ಹಾಗೂ ಮೆಚ್ಚುಗೆ ಬಹುಮಾನ ಪಡೆದ ಇಬ್ಬರಿಗೆ ತಲಾ ₹ 1,000 ಪ್ರದಾನ ಮಾಡಲಾಗುವುದು. ಉತ್ತಮ ಕಥೆ ಬರೆದ ಒಬ್ಬರು ಕಾಲೇಜು ವಿದ್ಯಾರ್ಥಿನಿಗೆ ₹ 2,000 ಬಹುಮಾನ ನೀಡಲಾಗುವುದು. ವಿಜೇತರಿಗೆ ಅಭಿನಂದನಾ ಪತ್ರವನ್ನೂ ವಿತರಿಸಲಾಗುವುದು’ ಎಂದರು.</p>.<p>ಸ್ಪರ್ಧೆಯಲ್ಲಿ ಭಾಗವಹಿಸುವ ಕಾಲೇಜು ವಿದ್ಯಾರ್ಥಿನಿಯರು ಕಥೆಯೊಂದಿಗೆ ಕಾಲೇಜಿನ ಪ್ರಾಂಶುಪಾಲರಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಕಥೆಗಳು 2,500 ಶಬ್ದಗಳಿಗೆ ಮೀರದಂತೆ ಇರಬೇಕು. ಫೆ.23ರ ಒಳಗಾಗಿಕಥೆ ಕಳುಹಿಸಬೇಕು.</p>.<p>ವಿಳಾಸ: ಅರವಿಂದ ಕರ್ಕಿಕೋಡಿ, ಅಧ್ಯಕ್ಷರು, ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ‘ಕನ್ನಡದ ಹಣತೆ’, ಜೆ.ಎಂ.ಎಫ್.ಸಿ. ಕೋರ್ಟ್ ಪಕ್ಕ, ಕೋರ್ಟ್ ರಸ್ತೆ, ಕುಮಟಾ ಅಂಚೆ ಮತ್ತು ತಾಲ್ಲೂಕು (ಉತ್ತರ ಕನ್ನಡ ಜಿಲ್ಲೆ) – 581343.</p>.<p>ನುಡಿ ತಂತ್ರಾಂಶದಲ್ಲಿ ಕಥೆ ಕಳುಹಿಸುವವರು <strong>ಇ-ಮೇಲ್: </strong>kannadadahanate56@gmail.comಗೂ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ವಾಟ್ಸ್ಆ್ಯಪ್ ಸಂಖ್ಯೆ: 96116 50066 ಸಂಪರ್ಕಿಸಬಹುದು.</p>.<p>ಜಯಾ ಅವರಿಗೆ 2020ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಪ್ರಕಟಿಸಿತ್ತು. ತೀವ್ರ ಅನಾರೋಗ್ಯದಿಂದಾಗಿ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಕೆಲವೇ ದಿನಗಳಲ್ಲಿ ಅವರು ನಿಧನರಾದರು. ಅವರ ಕುಟುಂಬದವರ ಅಭಿಪ್ರಾಯದಂತೆ ಪ್ರಶಸ್ತಿಯ ₹ 15 ಸಾವಿರವನ್ನು ಕಥಾ ಸ್ಪರ್ಧೆಯ ವಿಜೇತರಿಗೆ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>