ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ತಹಶೀಲ್ದಾರ್ ಆರ್.ವಿ.ಕಟ್ಟಿ ಹಾಗೂ ಡಿ.ವೈ.ಎಸ್.ಪಿ ಅರವಿಂದ ಕಲಗುಜ್ಜಿ ಹಾಗೂ ಇತರ ಅಧಿಕಾರಿಗಳು ಮಾಜಾಳಿಗೆ ಭೇಟಿ ನೀಡಿದರು. ಮೇ 10ರವರೆಗೆ ಈಗಿನಂತೆ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಇರಲಿದೆ. ನಂತರ, ಸರಕು ಮತ್ತು ಜೀವನಾವಶ್ಯಕ ವಸ್ತುಗಳ ಸಾಗಣೆ ವಾಹನಗಳು, ತುರ್ತು ಸೇವೆಗಳನ್ನು ಹೊರತುಪಡಿಸಿ ಮತ್ತೆಲ್ಲವುಗಳಿಗೂ ನಿಷೇಧ ಹೇರುವುದು ನಿಚ್ಚಳವಾಗಿದೆ.