ತಾಲ್ಲೂಕಿನ ವೈಲವಾಡ ಗ್ರಾಮದ ನಿವಾಸಿ, ಎಂಜಿನಿಯರಿಂಗ್ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ಸಾಗರ ನಾಯ್ಕ, ತಮ್ಮ ಮನೆಯ ಈ ಸೌಲಭ್ಯವನ್ನು ಇತರ ವಿದ್ಯಾರ್ಥಿಗಳಿಗೂ ಒದಗಿಸಿಕೊಟ್ಟಿದ್ದಾರೆ. ಈ ಮೂಲಕ ತಮ್ಮ ಊರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿದ್ದರೂ ವಿದ್ಯಾರ್ಥಿಗಳ ಕಲಿಕೆಗೆ ಅಡಚಣೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಸಿದ್ದರದಿಂದ ದೇವಳಮಕ್ಕಿವರೆಗಿನ ವಿದ್ಯಾರ್ಥಿಗಳು ಇಲ್ಲಿಗೆ ಬಂದು ತರಗತಿಗೆ ಹಾಜರಾಗುತ್ತಿದ್ದಾರೆ.