ಒಂದು ವಾರದ ಬಿಡದೇ ಕಾಡಿದ್ದಪ್ರವಾಹದಿಂದ ನದಿ ತೀರದ ಹತ್ತಾರು ಮನೆಗಳು ಕುಸಿದಿವೆ. ರಾಮನಗುಳಿ, ಗುಳ್ಳಾಪುರ ಭಾಗದಲ್ಲಿ ಕೂಲಿಕಾರರೇ ಜಾಸ್ತಿ ವಾಸವಿದ್ದಾರೆ. ನೆರೆ ಇಳಿದ ಬಳಿಕ ಅವರಿಗೆ ಕುಸಿದ ಮನೆಗಳಲ್ಲಿ ಅಳಿದುಳಿದ ವಸ್ತುಗಳನ್ನು ಜೋಡಿಸಿಕೊಳ್ಳುವುದು, ಮನೆಯಿದ್ದರೂ ನೀರಿನಲ್ಲಿ ಕೊಚ್ಚಿಕೊಂಡು ಹೋದ ವಸ್ತುಗಳನ್ನುಹುಡುಕುವುದೇ ದೊಡ್ಡ ಕೆಲಸವಾಗಿದೆ. ಹಾಗಾಗಿ ಮನೆ ಮಂದಿಗೆ ಮಕ್ಕಳೂ ಸಹಕರಿಸುತ್ತಿದ್ದಾರೆ.