<p><strong>ಶಿರಸಿ:</strong> ಲಾಕ್ಡೌನ್ ಕಾರಣದಿಂದ ಮಧ್ಯಪ್ರದೇಶದ ನವೋದಯ ಶಾಲೆಯಲ್ಲಿ ಸಿಲುಕಿಕೊಂಡಿದ್ದ ಜಿಲ್ಲೆಯ 19 ವಿದ್ಯಾರ್ಥಿಗಳು ಶನಿವಾರ ಸುರಕ್ಷಿತವಾಗಿ ಮುಂಡಗೋಡ ತಾಲ್ಲೂಕಿನ ಮಳಗಿ ಜವಾಹರ ನವೋದಯ ಶಾಲೆ ತಲುಪಿದರು.</p>.<p>ಇಲ್ಲಿನ ನವೋದಯ ಶಾಲೆಯಿಂದ 19 ಮಕ್ಕಳು ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಧ್ಯಪ್ರದೇಶದ ಜುನಾಪಾನಿ ನವೋದಯ ಶಾಲೆಯ ಒಂಬತ್ತನೆ ತರಗತಿಗೆ ಪ್ರವೇಶ ಪಡೆದಿದ್ದರು. ಮಾರ್ಚ್ 22ರಂದು ಅವರು ಊರಿಗೆ ಹೊರಡುವಷ್ಟರಲ್ಲಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಆ ಕಾರಣಕ್ಕೆ ಅವರು ಅಲ್ಲಿನ ಹಾಸ್ಟೆಲ್ನಲ್ಲಿಯೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಎದುರಾಯಿತು.</p>.<p>ಈ ವಿಷಯವನ್ನು ಪಾಲಕರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ಬಳಿ ಹೇಳಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಧ್ಯಪ್ರದೇಶ ಸರ್ಕಾರವನ್ನು ಸಂಪರ್ಕಿಸುವಂತೆ ತಿಳಿಸಿದರು. ಇದರ ಫಲವಾಗಿ, ವಿಶೇಷ ಬಸ್ನಲ್ಲಿ ವಿದ್ಯಾರ್ಥಿಗಳು ಊರಿಗೆ ಬಂದರು.</p>.<p>ಸಚಿವ ಹೆಬ್ಬಾರ್ ಅವರು, ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ‘ತಾಯಂದಿರ ಕಷ್ಟವನ್ನು ಅರಿತು ಮಕ್ಕಳನ್ನು ಕರೆತರಲು ಕಾಳಜಿ ವಹಿಸಲಾಗಿದೆ. ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಎರಡು ದಿನಗಳ ಬಳಿಕ ಮನೆಗಳಿಗೆ ಕಳುಹಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>‘ಜುನಾಪಾನಿಯಲ್ಲಿ ಮಕ್ಕಳು ಸುರಕ್ಷಿತವಾಗಿದ್ದರು. ಅಲ್ಲಿನ ಹಾಸ್ಟೆಲ್ನಲ್ಲಿ ಅವರಿಗೆ ಎಲ್ಲ ವ್ಯವಸ್ಥೆಯನ್ನೂ ಒದಗಿಸಲಾಗಿತ್ತು. ಆದರೆ, ಮಕ್ಕಳ ಪಾಲಕರು ಆತಂಕಗೊಂಡಿದ್ದರಿಂದ, ವಿಶೇಷ ಮುತುವರ್ಜವಹಿಸಿ, ಕರೆತರಲಾಗಿದೆ’ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದರು. ಸಂಸದ ಅನಂತಕುಮಾರ್ ಹೆಗಡೆ ಕೂಡ ಮಕ್ಕಳನ್ನು ಕರೆತರುವಲ್ಲಿ ಶ್ರಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಲಾಕ್ಡೌನ್ ಕಾರಣದಿಂದ ಮಧ್ಯಪ್ರದೇಶದ ನವೋದಯ ಶಾಲೆಯಲ್ಲಿ ಸಿಲುಕಿಕೊಂಡಿದ್ದ ಜಿಲ್ಲೆಯ 19 ವಿದ್ಯಾರ್ಥಿಗಳು ಶನಿವಾರ ಸುರಕ್ಷಿತವಾಗಿ ಮುಂಡಗೋಡ ತಾಲ್ಲೂಕಿನ ಮಳಗಿ ಜವಾಹರ ನವೋದಯ ಶಾಲೆ ತಲುಪಿದರು.</p>.<p>ಇಲ್ಲಿನ ನವೋದಯ ಶಾಲೆಯಿಂದ 19 ಮಕ್ಕಳು ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಧ್ಯಪ್ರದೇಶದ ಜುನಾಪಾನಿ ನವೋದಯ ಶಾಲೆಯ ಒಂಬತ್ತನೆ ತರಗತಿಗೆ ಪ್ರವೇಶ ಪಡೆದಿದ್ದರು. ಮಾರ್ಚ್ 22ರಂದು ಅವರು ಊರಿಗೆ ಹೊರಡುವಷ್ಟರಲ್ಲಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಆ ಕಾರಣಕ್ಕೆ ಅವರು ಅಲ್ಲಿನ ಹಾಸ್ಟೆಲ್ನಲ್ಲಿಯೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಎದುರಾಯಿತು.</p>.<p>ಈ ವಿಷಯವನ್ನು ಪಾಲಕರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ಬಳಿ ಹೇಳಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಧ್ಯಪ್ರದೇಶ ಸರ್ಕಾರವನ್ನು ಸಂಪರ್ಕಿಸುವಂತೆ ತಿಳಿಸಿದರು. ಇದರ ಫಲವಾಗಿ, ವಿಶೇಷ ಬಸ್ನಲ್ಲಿ ವಿದ್ಯಾರ್ಥಿಗಳು ಊರಿಗೆ ಬಂದರು.</p>.<p>ಸಚಿವ ಹೆಬ್ಬಾರ್ ಅವರು, ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ‘ತಾಯಂದಿರ ಕಷ್ಟವನ್ನು ಅರಿತು ಮಕ್ಕಳನ್ನು ಕರೆತರಲು ಕಾಳಜಿ ವಹಿಸಲಾಗಿದೆ. ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಎರಡು ದಿನಗಳ ಬಳಿಕ ಮನೆಗಳಿಗೆ ಕಳುಹಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>‘ಜುನಾಪಾನಿಯಲ್ಲಿ ಮಕ್ಕಳು ಸುರಕ್ಷಿತವಾಗಿದ್ದರು. ಅಲ್ಲಿನ ಹಾಸ್ಟೆಲ್ನಲ್ಲಿ ಅವರಿಗೆ ಎಲ್ಲ ವ್ಯವಸ್ಥೆಯನ್ನೂ ಒದಗಿಸಲಾಗಿತ್ತು. ಆದರೆ, ಮಕ್ಕಳ ಪಾಲಕರು ಆತಂಕಗೊಂಡಿದ್ದರಿಂದ, ವಿಶೇಷ ಮುತುವರ್ಜವಹಿಸಿ, ಕರೆತರಲಾಗಿದೆ’ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದರು. ಸಂಸದ ಅನಂತಕುಮಾರ್ ಹೆಗಡೆ ಕೂಡ ಮಕ್ಕಳನ್ನು ಕರೆತರುವಲ್ಲಿ ಶ್ರಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>