‘ಕಾಲೇಜಿನ 300 ವಿದ್ಯಾರ್ಥಿಗಳಿಗೆ ಓದು ಪೂರ್ಣಗೊಂಡ ಬಳಿಕ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ ಗಂಗಾಧರನ್, ತಲಾ ₹ 1.50 ಲಕ್ಷ ಪಡೆದುಕೊಂಡಿದ್ದಾರೆ. ಅಲ್ಲದೇ ಕೆಲಸಕ್ಕೆ ಸೇರಿದ ಬಳಿಕ ಪ್ರತಿ ತಿಂಗಳಿಗೆ ₹ 99 ಸಾವಿರ ವೇತನ ನೀಡುತ್ತಾರೆ ಎಂದು ವಿದ್ಯಾರ್ಥಿಗಳನ್ನು ನಂಬಿಸಲಾಗಿದೆ. ಆದರೆ, ಅತ್ತ ಕೆಲಸವೂ ಕೊಡಿಸದೇ ಹಣವನ್ನೂ ವಾಪಸ್ ಮಾಡದೇ ತಲೆ ಮರೆಸಿಕೊಂಡಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು’ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.