ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ದೇಶಪಾಂಡೆಯವರ ಮೇಲೆ ಭೂಮಿ ಅತಿಕ್ರಮಣ ಆರೋಪ ಹೊರಿಸಿದ್ದ ಕುಮಾರಸ್ವಾಮಿ ಈಗ ಅವರನ್ನು ಸಚಿವ ಸಂಪುಟದಲ್ಲಿಟ್ಟುಕೊಂಡಿದ್ದಾರೆ. ಯಾರು ಸುಳ್ಳರು ಎಂಬುದು ಜನತೆಗೆ ತಿಳಿಯುತ್ತಿದೆ. ದೇಶಪಾಂಡೆ ಅವರ ಮೇಲೆ ಪ್ರಕರಣ ದಾಖಲಿಸುತ್ತೇನೆ ಎಂದು ಹೇಳಿದ್ದ ಕುಮಾರಸ್ವಾಮಿ, ಅವರನ್ನಿಟ್ಟುಕೊಂಡು ಚುನಾವಣೆ ಮಾಡುತ್ತಾರೆ. ಧೈರ್ಯವಿದ್ದರೆ ಅವರು ದೇಶಪಾಂಡೆ ವಿರುದ್ಧ ತನಿಖೆ ನಡೆಸಬೇಕು ಎಂದು ಸವಾಲು ಹಾಕಿದರು.