ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪರ್ ಸ್ಪೆಶಾಲಿಟಿ ಆಸ್ಪತ್ರೆ ಬೇಡಿಕೆ ನ್ಯಾಯಸಮ್ಮತ; ಹೆಬ್ಬಾರ

Last Updated 23 ಜುಲೈ 2022, 12:47 IST
ಅಕ್ಷರ ಗಾತ್ರ

ಶಿರಸಿ: ‘ಉತ್ತರ ಕನ್ನಡ ಜಿಲ್ಲೆಗೆ ಸುಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂಬ ಸಾರ್ವಜನಿಕರ ಬೇಡಿಕೆ ನ್ಯಾಯಸಮ್ಮತವಾಗಿದೆ. ಅವರ ಹೋರಾಟಕ್ಕೆ ಬೆಂಬಲವಿದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಇಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಸುಪರ್ ಸ್ಪೆಶಾಲಿಟಿ ಆಸ್ಪತ್ರೆ ಸೌಲಭ್ಯವಿಲ್ಲ. ಜಿಲ್ಲೆಯ ಜನಪ್ರತಿನಿಧಿಯಾಗಿ, ಸರ್ಕಾರದ ಭಾಗವಾಗಿ ಆಸ್ಪತ್ರೆ ಸ್ಥಾಪನೆ ಸಂಬಂಧ ಮುಖ್ಯಮಂತ್ರಿ, ಆರೋಗ್ಯ ಸಚಿವರ ಜತೆಯೂ ಚರ್ಚಿಸಲಾಗುವುದು’ ಎಂದರು.

‘ಎಂಡೋ ಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ಸೇವೆ ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು ಪುನರಾರಂಭಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT