<p><strong>ಶಿರಸಿ: </strong>ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳು ಮತಬ್ಯಾಂಕ್ ದೃಷ್ಟಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿವೆ. ರೈತರ ಕಾಳಜಿ ಇಲ್ಲದ ಈ ಪಕ್ಷಗಳನ್ನು ಅಧಿಕಾರದಿಂದ ದೂರ ಇಡಲು ಪರ್ಯಾಯ ಶಕ್ತಿಗೆ ಬೆಂಬಲಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಮೇ 11ಕ್ಕೆ ರೈತ ಸಂಘದ ಕೋರ್ ಕಮಿಟಿ ಸಭೆ ನಡೆಯಲಿದೆ. ರೈತ ಸಂಘದ ಸಿದ್ಧಾಂತಗಳಿಗೆ ಒಪ್ಪಿದರೆ ಆಮ್ ಆದ್ಮಿ ಪಕ್ಷಕ್ಕೆ (ಆಪ್) ಬೆಂಬಲಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<p>‘ರಾಜ್ಯದಲ್ಲಿ ಶೇ65ರಷ್ಟು ರೈತರಿದ್ದಾರೆ. ಅವರು ಸಂಕಷ್ಟದಲ್ಲಿದ್ದಾರೆ. ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಹಿಂದುತ್ವದ ಅಸ್ತ್ರ ಬಳಕೆಯಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಏ.29 ರಂದು ಬಸವನಗುಡಿಯಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಅಲ್ಲಿ ಒತ್ತಾಯಿಸಲಾಗುವುದು. ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರೈತರ ಶಾಪಕ್ಕೆ ಗುರಿಯಾಗಲಿದೆ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳು ಮತಬ್ಯಾಂಕ್ ದೃಷ್ಟಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿವೆ. ರೈತರ ಕಾಳಜಿ ಇಲ್ಲದ ಈ ಪಕ್ಷಗಳನ್ನು ಅಧಿಕಾರದಿಂದ ದೂರ ಇಡಲು ಪರ್ಯಾಯ ಶಕ್ತಿಗೆ ಬೆಂಬಲಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಮೇ 11ಕ್ಕೆ ರೈತ ಸಂಘದ ಕೋರ್ ಕಮಿಟಿ ಸಭೆ ನಡೆಯಲಿದೆ. ರೈತ ಸಂಘದ ಸಿದ್ಧಾಂತಗಳಿಗೆ ಒಪ್ಪಿದರೆ ಆಮ್ ಆದ್ಮಿ ಪಕ್ಷಕ್ಕೆ (ಆಪ್) ಬೆಂಬಲಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<p>‘ರಾಜ್ಯದಲ್ಲಿ ಶೇ65ರಷ್ಟು ರೈತರಿದ್ದಾರೆ. ಅವರು ಸಂಕಷ್ಟದಲ್ಲಿದ್ದಾರೆ. ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಹಿಂದುತ್ವದ ಅಸ್ತ್ರ ಬಳಕೆಯಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಏ.29 ರಂದು ಬಸವನಗುಡಿಯಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಅಲ್ಲಿ ಒತ್ತಾಯಿಸಲಾಗುವುದು. ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರೈತರ ಶಾಪಕ್ಕೆ ಗುರಿಯಾಗಲಿದೆ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>