‘ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ, ಕೊಪ್ಪ ತಾಲ್ಲೂಕುಗಳಲ್ಲಿ 250ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಮೂವರು ಈಗಾಗಲೇ ಮೃತಪಟ್ಟಿದ್ದಾರೆ.ಆರು ದಶಕಗಳಿಂದ ಈ ಭಾಗದ ಜನರಿಗೆದುಃಸ್ವಪ್ನವಾಗಿ ಕಾಡುತ್ತಿರುವ ಈ ವೈರಸ್ ಸೋಂಕು, ಮೈಸೂರು, ಚಾಮರಾಜನಗರ ಸೇರಿದಂತೆ ಇದೀಗ ಇತರ ಪ್ರದೇಶಗಳಿಗೂ ಹಬ್ಬುತ್ತಿರುವುದು ಆತಂಕಕಾರಿ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.