ನ್ಯಾಯಾಲಯದ ಆದೇಶದಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯವು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ಮರು ವಿಚಾರಣೆ ನಡೆಸಿತ್ತು. ವಿಚಾರಣೆ ಸಂದರ್ಭದಲ್ಲಿ ಜಯಶ್ರೀ ಮೊಗೇರ ಅವರು, ತಾವು ಅನುಸೂಚಿತ ಮೊಗೇರ ಜಾತಿಗೆ ಸೇರಿದವರು ಎಂದು ದಾಖಲೆಗಳನ್ನು ಸಲ್ಲಿಸಲು ವಿಫಲರಾದರು. ಹಾಗಾಗಿಉಪವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಅವರು ಜಯಶ್ರೀ ಮೊಗೇರ ಅವರ ಜಾತಿ ಪ್ರಮಾಣ ಪತ್ರ ರದ್ದುಪಡಿಸುವಂತೆ ಕೆಲವುದಿನಗಳ ಹಿಂದೆ ಭಟ್ಕಳದ ತಹಶೀಲ್ದಾರ್ ಅವರಿಗೆ ಆದೇಶಿಸಿದ್ದರು.