‘ಹಳಗಾದ ಅಗಳಿ, ಕಾತ್ನೆಯಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಮರದ ಕಂಬಗಳನ್ನು ಹಾಕಲಾಗಿದೆ. ಮಳೆಗಾಲ ಆಗಿರುವುದರಿಂದ ಈ ಕಂಬಗಳಿಂದ ಅನಾಹುತಗಳು ಉಂಟಾಗುವ ಆತಂಕವಿದೆ. ಈ ಬಗ್ಗೆ ಗ್ರಾಮಸಭೆಗಳಲ್ಲಿ ಚರ್ಚೆಯೂ ಆಗಿದೆ. ಹೀಗಾಗಿ, ಅಲ್ಲಿ ಅವಶ್ಯವಿರುವ ನಾಲ್ಕು ವಿದ್ಯುತ್ ಕಂಬಗಳ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಅಧ್ಯಕ್ಷೆ ಪ್ರಮೀಳಾ ನಾಯ್ಕ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.