ಮಂಗಳವಾರ ಇಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಸದಸ್ಯ ವಿನಾಯಕ ಭಟ್ಟ, ‘ಕೆಲವು ಮನೆಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ನೀಡಿಲ್ಲ. ಆದರೆ, ಫಲಾನುಭವಿಯಿಂದ ಒತ್ತಾಯಪೂರ್ವಕವಾಗಿ ಸಹಿ ಪಡೆದು, ಊರಿನ ಎದುರು ಫಲಕ ಹಾಕಲಾಗಿದೆ. ಇದರಿಂದ ಇನ್ನು ವಿದ್ಯುತ್ ಸಿಗಬಹುದೇ ಎಂಬ ಆತಂಕದಲ್ಲಿ ಅವರಿದ್ದಾರೆ’ ಎಂದರು. ‘ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಗುತ್ತಿಗೆದಾರರಿಗೆ ಬಿಲ್ ಪಾವತಿಸಬಾರದು. ತರಾತುರಿಯಲ್ಲಿ ಕೆಲಸ ಮುಗಿಸಲು ಗುತ್ತಿಗೆದಾರರು ಈ ರೀತಿ ಮಾಡುವುದು ಸರಿಯಲ್ಲ’ ಎಂದು ಉಪಾಧ್ಯಕ್ಷ ಚಂದ್ರು ದೇವಾಡಿಗ ಹೇಳಿದರು.