ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಗಂಭೀರ ಸಮಸ್ಯೆಯಿದ್ದರೂ, ಸರ್ಕಾರಿ ಆಸ್ಪತ್ರೆಯಿಂದ ಪತ್ರ ತರುವಂತೆ ಖಾಸಗಿ ಆಸ್ಪತ್ರೆಯವರು ಹೇಳುತ್ತಾರೆ ಎಂದು ಉಪಾಧ್ಯಕ್ಷ ಚಂದ್ರು ದೇವಾಡಿಗ ಆರೋಪಿಸಿದರು. ಪ್ರಾಥಮಿಕ ಸಮಸ್ಯೆಯಿದ್ದರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಬಹುದು. ಗಂಭೀರ ಸಮಸ್ಯೆಯಿದ್ದರೆ (ಐಸಿಯು) ರೋಗಿಯನ್ನು ಆಸ್ಪತ್ರೆಗೆ ಸೇರಿಸಲು ಪತ್ರದ ಅವಶ್ಯಕತೆ ಇರುವುದಿಲ್ಲ. ಅಂತಹ ಪ್ರಕರಣ ಇದ್ದರೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ದೂರು ನೀಡಬಹುದು ಎಂದು ಪಂಡಿತ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಜಾನನ ಭಟ್ಟ ತಿಳಿಸಿದರು.