ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಯಂ ಘೋಷಿತ ಆಸ್ತಿ ತೆರಿಗೆ ರದ್ದು ಮಾಡಲಾ ಗುವುದು. ತ್ಯಾಜ್ಯ ವಿಲೇವಾರಿ ತೆರಿಗೆ ರದ್ದು, ಸಮರ್ಪಕ ವ್ಯವಸ್ಥೆ, ಸ್ವಚ್ಛತೆಗೆ ಸಂಬಂಧಿಸಿ ವಾರ್ಡ್ ಕಮಿಟಿ ರಚನೆ, ಜೂಜು ಕೇಂದ್ರ ಅಕ್ರಮ ಸ್ಕಿಲ್ ಗೇಮ್, ವಿಡಿಯೊ ಗೇಮ್ಗಳ ಮೇಲೆ ಕ್ರಮ, ನೇತ್ರಾವತಿ ನದಿ ಮಾಲಿನ್ಯದ ವಿರುದ್ಧ ಕ್ರಮ, ನದಿಉಳಿಸಲು ಯೋಜನೆ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಶನ್ ಹಾವಳಿಗೆ ಕಡಿವಾಣ, ಎಡಿಬಿ ಕುಡ್ಸೆಂಪ್ 360 ಕೋಟಿಯ ಒಳಚರಂಡಿ ಭ್ರಷ್ಟಾಚಾರದ ತನಿಖೆ, ತಪ್ಪಿತಸ್ಥರಿಗೆ ಶಿಕ್ಷೆ ಒದಗಿಸಲು ಕ್ರಮ ತೆಗೆದು ಕೊಳ್ಳಲಾಗುವುದು’ ಎಂದು ಹೇಳಿದರು.