<p><strong>ಶಿರಸಿ: </strong>ಹೊಸ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರು ಹೆಚ್ಚು ಅಧ್ಯಯನ ಮಾಡಿಕೊಂಡು ಸಮಾಜಕ್ಕೆ ತಿಳಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ನಗರದ ಅಂಬೇಡ್ಕರ ಭವನದಲ್ಲಿ ಭಾನುವಾರ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ನೀತಿಯ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ನೀತಿಯ ಒಳ್ಳೆಯ ಅಂಶಗಳನ್ನು ಜನರಿಗೆ ತಿಳಿಸಬೇಕು. ಕೌಶಲ್ಯಕ್ಕೆ ತಕ್ಕಂತೆ ಶಿಕ್ಷಣ ನೀಡುವ ಹೊಸ ಶಿಕ್ಷಣ ನೀತಿಯ ಉದ್ದೇಶ ಒಳ್ಳೆಯದು. ಸ್ವಾಭಿಮಾನದ ಜೀವನ ನಡೆಸಲು ಯುವ ಪೀಳಿಗೆಗೆ ಇದು ಸಹಕಾರಿಯಾಗಲಿದೆ' ಎಂದರು.</p>.<p>'ರಾಷ್ಟ್ರಪ್ರೇಮ ಮೂಡಿಸುವ ಶಿಕ್ಷಣ ವಿದ್ಯಾರ್ಥಿಗಳಿಗೆ ಬೇಕಿದೆ. ದೇಶಭಕ್ತ ಯುವಸಮೂಹ ರೂಪಿಸುವುದು ಶಿಕ್ಷಕರ ಗುರಿಯಾಗಲಿ'. 'ಕ್ರಿಯಾಶೀಲತೆಯ ಮೂಲಕ ಕೋವಿಡ್ ಕಾಲಘಟ್ಟದಲ್ಲೂ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಜೀವಂತವಿಟ್ಟಿದ್ದು ಶಿಕ್ಷಕರ ಸಾಧನೆ' ಎಂದು ಶ್ಲಾಘಿಸಿದರು.<br /><br />ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, 'ಜೀವನದಲ್ಲಿ ಗುರಿ ಸಾಧಿಸಲು ಗುರು ಬೇಕು. ವಿದ್ಯಾರ್ಥಿಯನ್ನು ಸಾಧಕರಾಗಿಸುವದು ಶಿಕ್ಷಕ ಸ್ವಾರ್ಥರಹಿತ ಸೇವೆ' ಎಂದರು.</p>.<p><strong>ಪ್ರಶಸ್ತಿ ಪ್ರಧಾನ:</strong> ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಹದಿನೆಂಟು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿರಸಿಯ ಅರುಣೋದಯ ಸಂಸ್ಥೆ ನೀಡುವ 'ಪಾಂಡುರಂಗ ಪ್ರಶಸ್ತಿ'ಯನ್ನು ನೀಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರಿಗೆ ತುರ್ತು ಸ್ಥಿತಿಯಲ್ಲಿ ನೆರವಾಗುವ ಶಿಕ್ಷಕ ಬಂಧು ಯೋಜನೆಗೆ ಚಾಲನೆ ನೀಡಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ತಹಶೀಲ್ದಾರ ಎಂ.ಆರ್.ಕುಲಕರ್ಣಿ, ಡಿಡಿಪಿಐ ದಿವಾಕರ ಶೆಟ್ಟಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಿ.ಆರ್.ನಾಯ್ಕ, ಬಿಇಓ ಎಂ.ಎಸ್.ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಹೊಸ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರು ಹೆಚ್ಚು ಅಧ್ಯಯನ ಮಾಡಿಕೊಂಡು ಸಮಾಜಕ್ಕೆ ತಿಳಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ನಗರದ ಅಂಬೇಡ್ಕರ ಭವನದಲ್ಲಿ ಭಾನುವಾರ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ನೀತಿಯ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ನೀತಿಯ ಒಳ್ಳೆಯ ಅಂಶಗಳನ್ನು ಜನರಿಗೆ ತಿಳಿಸಬೇಕು. ಕೌಶಲ್ಯಕ್ಕೆ ತಕ್ಕಂತೆ ಶಿಕ್ಷಣ ನೀಡುವ ಹೊಸ ಶಿಕ್ಷಣ ನೀತಿಯ ಉದ್ದೇಶ ಒಳ್ಳೆಯದು. ಸ್ವಾಭಿಮಾನದ ಜೀವನ ನಡೆಸಲು ಯುವ ಪೀಳಿಗೆಗೆ ಇದು ಸಹಕಾರಿಯಾಗಲಿದೆ' ಎಂದರು.</p>.<p>'ರಾಷ್ಟ್ರಪ್ರೇಮ ಮೂಡಿಸುವ ಶಿಕ್ಷಣ ವಿದ್ಯಾರ್ಥಿಗಳಿಗೆ ಬೇಕಿದೆ. ದೇಶಭಕ್ತ ಯುವಸಮೂಹ ರೂಪಿಸುವುದು ಶಿಕ್ಷಕರ ಗುರಿಯಾಗಲಿ'. 'ಕ್ರಿಯಾಶೀಲತೆಯ ಮೂಲಕ ಕೋವಿಡ್ ಕಾಲಘಟ್ಟದಲ್ಲೂ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಜೀವಂತವಿಟ್ಟಿದ್ದು ಶಿಕ್ಷಕರ ಸಾಧನೆ' ಎಂದು ಶ್ಲಾಘಿಸಿದರು.<br /><br />ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, 'ಜೀವನದಲ್ಲಿ ಗುರಿ ಸಾಧಿಸಲು ಗುರು ಬೇಕು. ವಿದ್ಯಾರ್ಥಿಯನ್ನು ಸಾಧಕರಾಗಿಸುವದು ಶಿಕ್ಷಕ ಸ್ವಾರ್ಥರಹಿತ ಸೇವೆ' ಎಂದರು.</p>.<p><strong>ಪ್ರಶಸ್ತಿ ಪ್ರಧಾನ:</strong> ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಹದಿನೆಂಟು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿರಸಿಯ ಅರುಣೋದಯ ಸಂಸ್ಥೆ ನೀಡುವ 'ಪಾಂಡುರಂಗ ಪ್ರಶಸ್ತಿ'ಯನ್ನು ನೀಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರಿಗೆ ತುರ್ತು ಸ್ಥಿತಿಯಲ್ಲಿ ನೆರವಾಗುವ ಶಿಕ್ಷಕ ಬಂಧು ಯೋಜನೆಗೆ ಚಾಲನೆ ನೀಡಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ತಹಶೀಲ್ದಾರ ಎಂ.ಆರ್.ಕುಲಕರ್ಣಿ, ಡಿಡಿಪಿಐ ದಿವಾಕರ ಶೆಟ್ಟಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಿ.ಆರ್.ನಾಯ್ಕ, ಬಿಇಓ ಎಂ.ಎಸ್.ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>