'ಸಿಸಿಎಫ್ ಯತೀಶಕುಮಾರ, ಡಿಎಫ್ಒ ಗೋಪಾಲಕೃಷ್ಣ ಹೆಗಡೆ ಸೇರಿದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಪ್ರೋತ್ಸಾಹದಿಂದ ಮುಖ್ಯಮಂತ್ರಿಗಳ ಪದಕ ಲಭಿಸಿದೆ. ಹಲವು ಪ್ರಕರಣಗಳ ತನಿಖೆಯಲ್ಲಿ ಸಹಕರಿಸಿದ ಹೊನ್ನಾವರ ಸಿಪಿಐ ಶ್ರೀಧರ್, ಅಂಕೋಲಾ ಎಸ್.ಐ ಸಂಪತ್ಕುಮಾರ, ಯಲ್ಲಾಪುರ ಠಾಣೆಯ ಸಿಬ್ಬಂದಿ ಶಫಿ ಅವರ ಸಹಾಯವನ್ನು ಮರೆಯುವಂತಿಲ್ಲ. ಶ್ರೀಗಂಧ ಮರಗಳ ಅಕ್ರಮ ಕಟಾವು ತಡೆದು, ರೈತರಿಗೆ ಅನುಕೂಲ ಮಾಡಿಕೊಡಲು ಶ್ರಮಿಸುತ್ತೇನೆ' ಎಂದು ಹಮಾಣಿ 'ಪ್ರಜಾವಾಣಿ'ಗೆ ತಿಳಿಸಿದರು.