ಶಿರಸಿ: ಕೊರೊನಾ ವೈರಾಣು ಸೋಂಕು ಹರಡುವುದನ್ನು ಕಡ್ಡಾಯವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮುಂದಿನ ಆದೇಶ ಬರುವವರೆಗೆ, ಇಲ್ಲಿನ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಭಕ್ತರು ಯಾವುದೇ ರೀತಿಯ ಸೇವೆ ಸಲ್ಲಿಸಲು, ದೇವರ ತೀರ್ಥ ಪ್ರಸಾದ ವಿತರಣೆ, ಪ್ರತಿದಿನದ ಅನ್ನ ಪ್ರಸಾದ ವಿತರಣೆ, ದೇವಸ್ಥಾನದ ವಸತಿ ಗೃಹದಲ್ಲಿ ಭಕ್ತರಿಗೆ ತಂಗಲು ಸಹ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.