ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಕಾಂಬಾ ದೇವಾಲಯದ ಪ್ರವೇಶ ನಿರ್ಬಂಧ

Last Updated 20 ಮಾರ್ಚ್ 2020, 15:36 IST
ಅಕ್ಷರ ಗಾತ್ರ

ಶಿರಸಿ: ಕೊರೊನಾ ವೈರಾಣು ಸೋಂಕು ಹರಡುವುದನ್ನು ಕಡ್ಡಾಯವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮುಂದಿನ ಆದೇಶ ಬರುವವರೆಗೆ, ಇಲ್ಲಿನ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಭಕ್ತರು ಯಾವುದೇ ರೀತಿಯ ಸೇವೆ ಸಲ್ಲಿಸಲು, ದೇವರ ತೀರ್ಥ ಪ್ರಸಾದ ವಿತರಣೆ, ಪ್ರತಿದಿನದ ಅನ್ನ ಪ್ರಸಾದ ವಿತರಣೆ, ದೇವಸ್ಥಾನದ ವಸತಿ ಗೃಹದಲ್ಲಿ ಭಕ್ತರಿಗೆ ತಂಗಲು ಸಹ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜನತಾ ಕರ್ಫ್ಯೂಗೆ ಬೆಂಬಲ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ನೀಡಿರುವ ಜನತಾ ಕರ್ಫ್ಯೂವನ್ನು ಬೆಂಬಲಿಸಿ, ಉತ್ತರ ಕನ್ನಡ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಮಾ.22ರಂದು ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲಿ ಸಾರ್ವಜನಿಕರಿಗೆ ಇಂಧನ ಮಾರಾಟವನ್ನು ಸ್ಥಗಿತಗೊಳಿಸಲಿದೆ. ಅಗ್ನಿ ಶಾಮಕ, ಆಂಬುಲೆನ್ಸ್, ಪೊಲೀಸ್ ಮೊದಲಾದ ತುರ್ತು ಸೇವೆಗೆ ಮಾತ್ರ ಇಂಧನ ಪೂರೈಸಲು ಬಂಕ್‌ನಲ್ಲಿ ಒಬ್ಬ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT