ಹೊನ್ನುಬಾಯಿ ಅವರ ಆರೋಗ್ಯ ಸಮಸ್ಯೆಯಾದ ಕಾರಣ ಒಂದು ವಾರದ ಹಿಂದೆಯಷ್ಟೇ ಮೋಹನ್ ಮನೆಗೆ ಬಂದಿದ್ದರು. ‘ಅಮ್ಮ ನಿನ್ನ ಆರೋಗ್ಯ ಸುಧಾರಣೆಯಾಗ್ಲಿ, ನಂತರ ಪಂಜಾಬ್ಗೆ ಕರೆದುಕೊಂಡು ಹೋಗ್ತೇನೆ. ಆ ಊರಲ್ಲಿ ನೀನು ಸುತ್ತಾಡ್ಬೇಕು, ಅಲ್ಲಿನ ಜನ, ಜೀವನ ನೋಡ್ಬೇಕು ಎಂದು ಹೇಳಿದಾನೆ. ಅವಕಾಶ ಆದ್ರೆ ಒಮ್ಮೆ ಹೋಗಿಬರುವ ಆಸೆಯಿದೆ’ ಎಂದು ಮುಗುಳ್ನಕ್ಕರು.