ರೈತಾಪಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸ್ಥಳೀಯ ಯುವಕರು ಮತ್ತು ಉದ್ಯೋಗದಲ್ಲಿರುವ ಗ್ರಾಮದ ಯುವಕರು ಬಿಡುವು ಮಾಡಿಕೊಂಡು ಈ ಕೆಲಸ ಮಾಡಿದ್ದಾರೆ. ‘ಕಲಕರಡಿ ಬಾಯ್ಸ್’ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶಾಲೆಗೆ ಬಣ್ಣ ಬಳಿಯುವ ಬಗ್ಗೆ ಚರ್ಚೆ ನಡೆಸಿಕೊಂಡಿದ್ದರು. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಲು ಮುಂದಾದ ಬಳಿಕ ಕೆಲಸ ಆರಂಭಿಸಿ ಒಂದೇ ದಿನದಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಬಳಿದಿದ್ದಾರೆ. ಜೊತೆಗೆ ಸಮೀಪದಲ್ಲಿರುವ ಮಾರುತಿ ದೇವಾಲಯಕ್ಕೂ ಬಣ್ಣ ಬಳಿದುಕೊಟ್ಟಿದ್ದಾರೆ.