<p><strong>ಕಾರವಾರ: </strong>ಕಳವು ಪ್ರಕರಣದ ಆರೋಪಿಯೊಬ್ಬನನ್ನು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ದಾಂಡೇಲಿಯಡಬ್ಲ್ಯು.ಸಿ.ಪಿ.ಎಂ. ಸ್ಟಾಫ್ ಕ್ವಾರ್ಟರ್ಸ್ ನಿವಾಸಿ, ಕೂಲಿ ಕೆಲಸ ಮಾಡುತ್ತಿದ್ದಕುಮಾರ ದೊಡ್ಮನಿ (24) ಬಂಧಿತ ಆರೋಪಿ.</p>.<p>ಆತನಿಂದ ಎರಡು ಟಿ.ವಿ.ಗಳು ಒಂದು ಫ್ರಿಜ್, ಒಂದು ಗಾದಿ, ಒಂದು ಟೀಪಾಯಿ, ನಾಲ್ಕು ಹೊದಿಕೆಗಳು, ನಾಲ್ಕು ತಲೆದಿಂಬುಗಳನ್ನು ಜಪ್ತಿ ಮಾಡಿದ್ದಾರೆ. ಇವುಗಳ ಅಂದಾಜು ಮೌಲ್ಯ ₹ 50 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳ ಆರೋಪಿಗಳ ಪತ್ತೆಗಾಗಿ ತಂಡ ರಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಸೂಚಿಸಿದ್ದರು.ದಾಂಡೇಲಿ ಉಪ ವಿಭಾಗದ ಡಿ.ವೈ.ಎಸ್.ಪಿ ಪಿ.ಮೋಹನ ಪ್ರಸಾದ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು.</p>.<p>ಸಿ.ಪಿ.ಐ ಪ್ರಭು ಆರ್ ಗಂಗನಹಳ್ಳಿ ನೇತೃತ್ವದತಂಡದಲ್ಲಿ ಪಿ.ಎಸ್.ಐ ಹಣಮಂತ ಬಿರಾದಾರ, ಎ.ಎಸ್.ಐ ಮಹಾವೀರ ಕಾಂಬಳೆ, ಹೆಡ್ ಕಾನ್ಸ್ಟೆಬಲ್ಗಳಾದಗಂಗಾಧರ ಹನಕನಹಳ್ಳಿ, ಅಶೋಕ ಮೋರೆ, ಸುಧೀರನಾಯ್ಕ, ಅನಿಲ ಸಾವಂತ ಮತ್ತು ಸಿಬ್ಬಂದಿಗ ಮಂಜುನಾಥ ಎಚ್.ಶೆಟ್ಟಿ, ರಾಮಪ್ಪ ಬಂಕಾಪುರ, ರೋಹಿತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಕಳವು ಪ್ರಕರಣದ ಆರೋಪಿಯೊಬ್ಬನನ್ನು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ದಾಂಡೇಲಿಯಡಬ್ಲ್ಯು.ಸಿ.ಪಿ.ಎಂ. ಸ್ಟಾಫ್ ಕ್ವಾರ್ಟರ್ಸ್ ನಿವಾಸಿ, ಕೂಲಿ ಕೆಲಸ ಮಾಡುತ್ತಿದ್ದಕುಮಾರ ದೊಡ್ಮನಿ (24) ಬಂಧಿತ ಆರೋಪಿ.</p>.<p>ಆತನಿಂದ ಎರಡು ಟಿ.ವಿ.ಗಳು ಒಂದು ಫ್ರಿಜ್, ಒಂದು ಗಾದಿ, ಒಂದು ಟೀಪಾಯಿ, ನಾಲ್ಕು ಹೊದಿಕೆಗಳು, ನಾಲ್ಕು ತಲೆದಿಂಬುಗಳನ್ನು ಜಪ್ತಿ ಮಾಡಿದ್ದಾರೆ. ಇವುಗಳ ಅಂದಾಜು ಮೌಲ್ಯ ₹ 50 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳ ಆರೋಪಿಗಳ ಪತ್ತೆಗಾಗಿ ತಂಡ ರಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಸೂಚಿಸಿದ್ದರು.ದಾಂಡೇಲಿ ಉಪ ವಿಭಾಗದ ಡಿ.ವೈ.ಎಸ್.ಪಿ ಪಿ.ಮೋಹನ ಪ್ರಸಾದ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು.</p>.<p>ಸಿ.ಪಿ.ಐ ಪ್ರಭು ಆರ್ ಗಂಗನಹಳ್ಳಿ ನೇತೃತ್ವದತಂಡದಲ್ಲಿ ಪಿ.ಎಸ್.ಐ ಹಣಮಂತ ಬಿರಾದಾರ, ಎ.ಎಸ್.ಐ ಮಹಾವೀರ ಕಾಂಬಳೆ, ಹೆಡ್ ಕಾನ್ಸ್ಟೆಬಲ್ಗಳಾದಗಂಗಾಧರ ಹನಕನಹಳ್ಳಿ, ಅಶೋಕ ಮೋರೆ, ಸುಧೀರನಾಯ್ಕ, ಅನಿಲ ಸಾವಂತ ಮತ್ತು ಸಿಬ್ಬಂದಿಗ ಮಂಜುನಾಥ ಎಚ್.ಶೆಟ್ಟಿ, ರಾಮಪ್ಪ ಬಂಕಾಪುರ, ರೋಹಿತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>