ಈ ಆರೋಪಿ ಭೇಟಿ ನೀಡಿದ್ದ ಪಂಡಿತ ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರು, ತಾಲ್ಲೂಕಿನ ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಹೋಂ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ‘ಸೀಲ್ಡೌನ್ ಮಾಡಿರುವ ಪ್ರದೇಶದ ಸಾರ್ವಜನಿಕರ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗುವುದು. ಕೋವಿಡ್ 19 ದೃಢಪಟ್ಟಿರುವ ಬೆಂಗಳೂರಿನಿಂದ ಬಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರು ಬೆಂಗಳೂರಿನಲ್ಲಿರುವಾಗಲೇ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಫಲಿತಾಂಶ ಬರುವ ಮುನ್ನವೇ ಅವರು, ಶಿರಸಿಗೆ ಬಂದಿದ್ದು, ಅವರಿಗೆ ಸೋಂಕು ಇರುವ ವಿಷಯವನ್ನು ಬಿಬಿಎಂಪಿ ಖಚಿತಪಡಿಸಿದೆ. ಮಾಹಿತಿ ನೀಡದೇ ಇಲ್ಲಿಗೆ ಬಂದಿರುವ ಕಾರಣ ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.