ಎಲ್ಲರೂ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 15 ಮಂದಿ ಜೊತೆಯಾಗಿ ಬಂದಿದ್ದು, ಏಳು ಜನ ಈಜಲು ನೀರಿಗೆ ಇಳಿದಿದ್ದರು. ಅವರಲ್ಲಿ ಐವರು ಅಲೆಯ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಗಮನಿಸಿದ ಜೀವರಕ್ಷಕ ಸಿಬ್ಬಂದಿ ಕೂಡಲೇ ಸಮುದ್ರಕ್ಕೆ ಜಿಗಿದರು. ಐವರನ್ನೂ ನೀರಿನಿಂದ ಹೊರಗೆಳೆದು ತಂದರು. ಆದರೆ, ದುರದೃಷ್ಟವಶಾತ್ ಮೂವರು ಮೃತಪಟ್ಟರು. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಗದೀಶ ನಾಯ್ಕ ಕೂಡಲೇ ಸ್ಥಳಕ್ಕೆ ಬಂದು ಪರೀಕ್ಷಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.