ನಗರಸಭೆ ಆಯುಕ್ತ ಆರ್.ಪಿ.ನಾಯ್ಕ ಮಾತನಾಡಿ, ‘ವಿದ್ಯಾರ್ಥಿಗಳು ಹಿಂಜರಿಕೆಯ ಸ್ವಭಾವವನ್ನು ತೊರೆದು ಮುನ್ನುಗ್ಗಿದಾಗ ಯಶಸ್ಸು ಸಿಗುತ್ತದೆ. ಬಹಳ ಅಧಿಕಾರಿಗಳು, ಗಣ್ಯ ವ್ಯಕ್ತಿಗಳು ಸರ್ಕಾರಿ ಶಾಲೆಯಲ್ಲಿ, ಕನ್ನಡ ಮಾಧ್ಯಮದಲ್ಲಿ ಹಾಗೂ ಕಲಾ ವಿಭಾಗದಲ್ಲಿಯೇ ಅಧ್ಯಯನ ಮಾಡಿದ್ದಾರೆ. ಅವರು ಉನ್ನತ ಸಾಧನೆ ಮಾಡಿದ್ದಾರೆ. ಅಂಥ ಸಾಧಕರ ಯಶಸ್ಸು ನಿಮಗೆ ಸ್ಫೂರ್ತಿಯಾಗಲಿ’ ಎಂದು ಹೇಳಿದರು.