ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟ್ರಾಫಿಕ್ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುತ್ತದೆ. ಏಕಮುಖ ಸಂಚಾರ, ವಾಹನ ನಿಲುಗಡೆಗೆ ಸದ್ಯದಲ್ಲಿ ವ್ಯವಸ್ಥಿತ ರೂಪ ನೀಡಲಾಗುವುದು. ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ವಾಹನ ಚಾಲನೆಯ ಸಂದರ್ಭದಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಲಾಗುತ್ತದೆ. ಇತ್ತೀಚೆಗೆ ನಡೆದಿರುವ ಹೆಚ್ಚಿನ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೇ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅವಘಡಗಳನ್ನು ಕಡಿಮೆಗೊಳಿಸಬೇಕಾಗಿದೆ’ ಎಂದರು.