ತಟ್ಟೀಸರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಟಿ.ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಸುನಿಲ್ ನಾಯ್ಕ, ಸಹಕಾರಿ ಯೂನಿಯನ್ ಅಧ್ಯಕ್ಷ ವಿ.ಎನ್.ಭಟ್ಟ ಅಳ್ಳಂಕಿ, ಸಹಕಾರಿ ಸಂಘಗಳ ಜಿಲ್ಲಾ ಉಪನಿಬಂಧಕ ಜಿ.ಎಸ್.ಜಯಪ್ರಕಾಶ್, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್.ಜೋಶಿ, ಮಹಾಮಂಡಳದ ನಿರ್ದೇಶಕರಾದ ಬಸವರಾಜ ಸುಲ್ತಾನಪುರಿ, ಆರ್.ಕೆ.ಪಾಟೀಲ ಇದ್ದರು. ಎಂ.ಎನ್.ಹೆಗಡೆ ಸ್ವಾಗತಿಸಿದರು. ರಾಜೇಂದ್ರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.