‘ವೈದ್ಯಕೀಯ ಕಾಲೇಜ್ನಲ್ಲಿರುವ ಕೋವಿಡ್–19 ವಾರ್ಡ್ ಸುರಕ್ಷಿತವಾಗಿದ್ದು,ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಮೇಲ್ವಿಚಾರಣೆ, ಭದ್ರತೆ, ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳೇ ಕೊರೊನಾ ವಾರ್ಡ್ನಲ್ಲೂ ಉಸ್ತುವಾರಿ ವಹಿಸಿದ್ದಾರೆ. ಸರ್ಕಾರ ಎಲ್ಲ ಜಿಲ್ಲಾ ಕೇಂದ್ರ ಹಾಗೂವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದಂತೆಇಲ್ಲೂ ಮಾಡಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಚರ್ಚಿಸಿದ್ದು, ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ. ಹೀಗಾಗಿ ಜನರುಆತಂಕಪಡಬಾರದು’ ಎಂದು ಮನವಿ ಮಾಡಿದ್ದಾರೆ.