ಭಾನುವಾರ, ಏಪ್ರಿಲ್ 2, 2023
32 °C

ಭಟ್ಕಳ: ಹಿಂಸಾತ್ಮಕವಾಗಿ ತುಂಬಲಾಗಿದ್ದ ಒಂಬತ್ತು ಜಾನುವಾರು ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾರಿಯಲ್ಲಿ ತುಂಬಲಾಗಿದ್ದ ಒಂಬತ್ತು ಜಾನುವಾರುಗಳು

ಭಟ್ಕಳ: ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಲಾಗಿದ್ದ ಒಂಬತ್ತು ಜಾನುವಾರನ್ನು ಶಹರ ಠಾಣೆ ಪೊಲೀಸರು ಭಾನುವಾರ ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಪಟ್ಟಣದ ಮುಗ್ದುಂ ಕಾಲೊನಿಯಲ್ಲಿದ್ದ ಲಾರಿಯಲ್ಲಿ ಜಾನುವಾರನ್ನು ತುಂಬಲಾಗಿತ್ತು. ಅವುಗಳನ್ನು ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ.

ಖಚಿತ ಮಾಹಿತಿ ಮೇರೆಗೆ ನಡೆಸಲಾದ ಕಾರ್ಯಾಚರಣೆಯಲ್ಲಿ ಪಿ.ಎಸೈ ಹನುಮಂತಪ್ಪ ಕುಡುಗುಂಟಿ, ಗ್ರಾಮೀಣ ಠಾಣೆ ಪಿ.ಎಸೈ ಭರತ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು