<p><strong>ಹಳಿಯಾಳ</strong>: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ತಾಲ್ಲೂಕಿನ 23 ಮಂದಿ ಈಚೆಗೆ ಹಿಂದೂ ಧರ್ಮವನ್ನು ಪುನಃ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಅವರನ್ನು ಸ್ವಾಗತಿಸಲಾಯಿತು.</p>.<p>ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ‘ನಾವು ಯಾವ ಧರ್ಮದಲ್ಲಿ ಜನ್ಮ ತಾಳಿದ್ದೇವೆಯೋ ಆ ಧರ್ಮದ ಸೇವೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದರು.</p>.<p>ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಘರ್ ವಾಪಸಿ ಧಾರ್ಮಿಕ ಕಾರ್ಯಕ್ರಮವು ಯಾವುದೇ ರಾಜಕೀಯ ಗಿಮಿಕ್ ಅಲ್ಲ. ಯಾವ ಧರ್ಮದಲ್ಲಿ ಹುಟ್ಟಿದ್ದೇವೆಯೋ ಆ ಧರ್ಮವನ್ನು ಪರಿಪಾಲನೆ ಮಾಡಬೇಕು. ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿಕೊಂಡು ಸಾಗುವುದರ ಜೊತೆಗೆ ಸ್ವ ಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಪ್ರತಿಯೊಬ್ಬರಲ್ಲೂ ಇರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ</strong>: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ತಾಲ್ಲೂಕಿನ 23 ಮಂದಿ ಈಚೆಗೆ ಹಿಂದೂ ಧರ್ಮವನ್ನು ಪುನಃ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಅವರನ್ನು ಸ್ವಾಗತಿಸಲಾಯಿತು.</p>.<p>ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ‘ನಾವು ಯಾವ ಧರ್ಮದಲ್ಲಿ ಜನ್ಮ ತಾಳಿದ್ದೇವೆಯೋ ಆ ಧರ್ಮದ ಸೇವೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದರು.</p>.<p>ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಘರ್ ವಾಪಸಿ ಧಾರ್ಮಿಕ ಕಾರ್ಯಕ್ರಮವು ಯಾವುದೇ ರಾಜಕೀಯ ಗಿಮಿಕ್ ಅಲ್ಲ. ಯಾವ ಧರ್ಮದಲ್ಲಿ ಹುಟ್ಟಿದ್ದೇವೆಯೋ ಆ ಧರ್ಮವನ್ನು ಪರಿಪಾಲನೆ ಮಾಡಬೇಕು. ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿಕೊಂಡು ಸಾಗುವುದರ ಜೊತೆಗೆ ಸ್ವ ಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಪ್ರತಿಯೊಬ್ಬರಲ್ಲೂ ಇರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>