ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರದಲ್ಲಿ ಸ್ಕಾರ್ಪಿಯೊ ಪಲ್ಟಿ: ಬೆಂಗಳೂರಿನ ಇಬ್ಬರು ಸ್ಥಳದಲ್ಲೇ ಸಾವು

Last Updated 17 ಏಪ್ರಿಲ್ 2021, 13:08 IST
ಅಕ್ಷರ ಗಾತ್ರ

ಕಾರವಾರ: ತಾಲ್ಲೂಕಿನ ಭೈರಾ ಗ್ರಾಮದ ರಾಜ್ಯ ಹೆದ್ದಾರಿ 34ರಲ್ಲಿ ಶನಿವಾರ ಸ್ಕಾರ್ಪಿಯೊ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಚಾಲಕ, ಬೆಂಗಳೂರಿನ ವಿದ್ಯಾರಣ್ಯಪುರದ ಸೈಯದ್ ಮುನೀರ್ ಸೈಯದ್ (35) ಹಾಗೂ ತಾಯವ್ವ (37) ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.

ಅವರು ತಾಲ್ಲೂಕಿನ ಹಳಗಾದ ಪಾರ್ಶ್ವವಾಯು ಚಿಕಿತ್ಸಾ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಪುನಃ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿಯಾದ ವೇಗದಲ್ಲಿದ್ದ ವಾಹನವನ್ನು ತಿರುವಿನಲ್ಲಿ ಚಾಲಕನಿಗೆ ನಿಯಂತ್ರಿಸಲಾಗದೇ ಪಲ್ಟಿಯಾಯಿತು. ಅಪಘಾತದ ರಭಸಕ್ಕೆ ಮೃತರಿಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT