<p><strong>ಕಾರವಾರ:</strong>ಜೊಯಿಡಾ ತಾಲ್ಲೂಕಿನ ಉಳವಿಯಲ್ಲಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.10ರಂದು ಸಂಜೆ 4ಕ್ಕೆ ಮಹಾರಥೋತ್ಸವ ನೆರವೇರಲಿದೆ ಎಂದು ಶ್ರೀ ಚೆನ್ನಬಸವೇಶ್ವರ ಟ್ರಸ್ಟ್ ಅಧ್ಯಕ್ಷ ಗಂಗಾಧರ ಚೆನ್ನಪ್ಪ ಕಿತ್ತೂರ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೆ.10ರಂದು ಶಾಸಕ ಆರ್.ವಿ.ದೇಶಪಾಂಡೆ ರಥಕ್ಕೆ ಪೂಜೆ ಸಲ್ಲಿಸಿರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳು ಈಗಾಗಲೇ ಆರಂಭವಾಗಿದ್ದು,ಭಕ್ತರಿಗೆ ಅಗತ್ಯವಾದ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ’ ಎಂದರು.</p>.<p>‘ಕ್ಷೇತ್ರದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವಸ್ಥಾನ ಟ್ರಸ್ಟ್ ₹ 40 ಲಕ್ಷ ವೆಚ್ಚದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಿದೆ. ಅದೇ ರೀತಿ, ಸರ್ಕಾರದ ಅನುದಾನದ ನೆರವಿನಲ್ಲಿ ಯಾತ್ರಿ ನಿವಾಸದ ಮೂರನೇ ಮಹಡಿಯಲ್ಲಿ 40 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಮಹಾದ್ವಾರವನ್ನು ಸ್ಥಾಪಿಸಲಾಗಿದ್ದು, ನೂತನ ಬಸ್ ನಿಲ್ದಾಣವನ್ನೂ ಉದ್ಘಾಟಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಟ್ರಸ್ಟ್ ಉಪಾಧ್ಯಕ್ಷ ಸಂಜಯ ಬಸವರಾಜ ಕಿತ್ತೂರ ಮಾತನಾಡಿ, ‘ಉತ್ಸವದ ಅಂಗವಾಗಿ ಫೆ.9ರಂದು ಮಧ್ಯಾಹ್ನ 12ಕ್ಕೆ ‘ಚನ್ನಬಸವ ಪ್ರಸಾದ’ ಮತ್ತು ‘ಶಿವಶರಣ ಶರಣೆಯರ ಪ್ರಸಾದ’ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು. ಆ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸುರೇಶ ಅಂಗಡಿ ಭಾಗವಹಿಸುವರು. ಬಿ.ಜೆ.ಪಿ.ಯ ರಾಜ್ಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ, ಶಾಸಕರಾದ ಮಹಾಂತೇಶ ಕೌಜಲಗಿ ಮತ್ತು ಮಹಾಂತೇಶ ದೊಡಗೌಡ್ರು ಪಾಲ್ಗೊಳ್ಳುವರು’ ಎಂದು ಹೇಳಿದರು.</p>.<p>ಫೆ.11ರಂದು ಬಯಲು ಕುಸ್ತಿ ಪಂದ್ಯಾವಳಿ ಹಾಗೂ 12ರಂದು ಓಕುಳಿಯೊಂದಿಗೆಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದರು ತಿಳಿಸಿದರು.</p>.<p>‘ಅಗತ್ಯ ಸಂದರ್ಭದಲ್ಲಿ ಭಕ್ತರ ಆರೋಗ್ಯ ತಪಾಸಣೆಗೆಂದು ಮೂವರು ವೈದ್ಯರು ಇರಲಿದ್ದಾರೆ.ದೇವಸ್ಥಾನ ಟ್ರಸ್ಟ್ನಿಂದ ಮೂರು ಹೊತ್ತು ಪ್ರಸಾದ ವಿತರಣೆ ಮಾಡಲಾಗುವುದು. ಈ ಬಾರಿ ಜಾತ್ರಾ ಮಹೋತ್ಸವಕ್ಕೆ ಸುಮಾರು 400 ಚಕ್ಕಡಿಗಳನ್ನು ರೈತರು ತರುವ ನಿರೀಕ್ಷೆಯಿದೆ. ಜಾನುವಾರಿನ ಸುರಕ್ಷತೆಗಾಗಿ ಜೊಯಿಡಾ ಮತ್ತು ದಾಂಡೇಲಿಯಿಂದ ಪಶು ವೈದ್ಯರ ಸಂಚಾರಿ ತಂಡವು ಸಂಚರಿಸಲಿದೆ’ ಎಂದು ಹೇಳಿದರು.</p>.<p class="Subhead"><strong>‘ಹಣ ಸಂಗ್ರಹಿಸುತ್ತಿಲ್ಲ’</strong></p>.<p class="Subhead">‘ಉಳವಿ ದೇವಸ್ಥಾನ ಟ್ರಸ್ಟ್ ಭಕ್ತರಿಂದ ವಂತಿಗೆ, ಕಾಣಿಕೆ ಸಂಗ್ರಹಿಸಲು ಯಾರಿಗೂ ರಸೀದಿ ಪುಸ್ತಕಗಳನ್ನು ನೀಡಿಲ್ಲ. ಯಾರಾದರೂ ದೇವಸ್ಥಾನದ ಹೆಸರಿನಲ್ಲಿ ಹಣ ನೀಡುವಂತೆ ಕೇಳಿದರೆ ಭಕ್ತರು ಎಚ್ಚರಿಕೆ ವಹಿಸಬೇಕು’ ಎಂದು ಟ್ರಸ್ಟ್ ಅಧ್ಯಕ್ಷ ಗಂಗಾಧರ ಚೆನ್ನಪ್ಪ ಕಿತ್ತೂರ ಹೇಳಿದ್ದಾರೆ.</p>.<p>ಕಾರವಾರ ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ಉಳ್ವೇಕರ್, ದೇವಸ್ಥಾನದ ಪ್ರಧಾನ ಅರ್ಚಕ ಶಂಕರಯ್ಯ ಕಲ್ಮಠ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong>ಜೊಯಿಡಾ ತಾಲ್ಲೂಕಿನ ಉಳವಿಯಲ್ಲಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.10ರಂದು ಸಂಜೆ 4ಕ್ಕೆ ಮಹಾರಥೋತ್ಸವ ನೆರವೇರಲಿದೆ ಎಂದು ಶ್ರೀ ಚೆನ್ನಬಸವೇಶ್ವರ ಟ್ರಸ್ಟ್ ಅಧ್ಯಕ್ಷ ಗಂಗಾಧರ ಚೆನ್ನಪ್ಪ ಕಿತ್ತೂರ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೆ.10ರಂದು ಶಾಸಕ ಆರ್.ವಿ.ದೇಶಪಾಂಡೆ ರಥಕ್ಕೆ ಪೂಜೆ ಸಲ್ಲಿಸಿರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳು ಈಗಾಗಲೇ ಆರಂಭವಾಗಿದ್ದು,ಭಕ್ತರಿಗೆ ಅಗತ್ಯವಾದ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ’ ಎಂದರು.</p>.<p>‘ಕ್ಷೇತ್ರದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವಸ್ಥಾನ ಟ್ರಸ್ಟ್ ₹ 40 ಲಕ್ಷ ವೆಚ್ಚದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಿದೆ. ಅದೇ ರೀತಿ, ಸರ್ಕಾರದ ಅನುದಾನದ ನೆರವಿನಲ್ಲಿ ಯಾತ್ರಿ ನಿವಾಸದ ಮೂರನೇ ಮಹಡಿಯಲ್ಲಿ 40 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಮಹಾದ್ವಾರವನ್ನು ಸ್ಥಾಪಿಸಲಾಗಿದ್ದು, ನೂತನ ಬಸ್ ನಿಲ್ದಾಣವನ್ನೂ ಉದ್ಘಾಟಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಟ್ರಸ್ಟ್ ಉಪಾಧ್ಯಕ್ಷ ಸಂಜಯ ಬಸವರಾಜ ಕಿತ್ತೂರ ಮಾತನಾಡಿ, ‘ಉತ್ಸವದ ಅಂಗವಾಗಿ ಫೆ.9ರಂದು ಮಧ್ಯಾಹ್ನ 12ಕ್ಕೆ ‘ಚನ್ನಬಸವ ಪ್ರಸಾದ’ ಮತ್ತು ‘ಶಿವಶರಣ ಶರಣೆಯರ ಪ್ರಸಾದ’ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು. ಆ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸುರೇಶ ಅಂಗಡಿ ಭಾಗವಹಿಸುವರು. ಬಿ.ಜೆ.ಪಿ.ಯ ರಾಜ್ಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ, ಶಾಸಕರಾದ ಮಹಾಂತೇಶ ಕೌಜಲಗಿ ಮತ್ತು ಮಹಾಂತೇಶ ದೊಡಗೌಡ್ರು ಪಾಲ್ಗೊಳ್ಳುವರು’ ಎಂದು ಹೇಳಿದರು.</p>.<p>ಫೆ.11ರಂದು ಬಯಲು ಕುಸ್ತಿ ಪಂದ್ಯಾವಳಿ ಹಾಗೂ 12ರಂದು ಓಕುಳಿಯೊಂದಿಗೆಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದರು ತಿಳಿಸಿದರು.</p>.<p>‘ಅಗತ್ಯ ಸಂದರ್ಭದಲ್ಲಿ ಭಕ್ತರ ಆರೋಗ್ಯ ತಪಾಸಣೆಗೆಂದು ಮೂವರು ವೈದ್ಯರು ಇರಲಿದ್ದಾರೆ.ದೇವಸ್ಥಾನ ಟ್ರಸ್ಟ್ನಿಂದ ಮೂರು ಹೊತ್ತು ಪ್ರಸಾದ ವಿತರಣೆ ಮಾಡಲಾಗುವುದು. ಈ ಬಾರಿ ಜಾತ್ರಾ ಮಹೋತ್ಸವಕ್ಕೆ ಸುಮಾರು 400 ಚಕ್ಕಡಿಗಳನ್ನು ರೈತರು ತರುವ ನಿರೀಕ್ಷೆಯಿದೆ. ಜಾನುವಾರಿನ ಸುರಕ್ಷತೆಗಾಗಿ ಜೊಯಿಡಾ ಮತ್ತು ದಾಂಡೇಲಿಯಿಂದ ಪಶು ವೈದ್ಯರ ಸಂಚಾರಿ ತಂಡವು ಸಂಚರಿಸಲಿದೆ’ ಎಂದು ಹೇಳಿದರು.</p>.<p class="Subhead"><strong>‘ಹಣ ಸಂಗ್ರಹಿಸುತ್ತಿಲ್ಲ’</strong></p>.<p class="Subhead">‘ಉಳವಿ ದೇವಸ್ಥಾನ ಟ್ರಸ್ಟ್ ಭಕ್ತರಿಂದ ವಂತಿಗೆ, ಕಾಣಿಕೆ ಸಂಗ್ರಹಿಸಲು ಯಾರಿಗೂ ರಸೀದಿ ಪುಸ್ತಕಗಳನ್ನು ನೀಡಿಲ್ಲ. ಯಾರಾದರೂ ದೇವಸ್ಥಾನದ ಹೆಸರಿನಲ್ಲಿ ಹಣ ನೀಡುವಂತೆ ಕೇಳಿದರೆ ಭಕ್ತರು ಎಚ್ಚರಿಕೆ ವಹಿಸಬೇಕು’ ಎಂದು ಟ್ರಸ್ಟ್ ಅಧ್ಯಕ್ಷ ಗಂಗಾಧರ ಚೆನ್ನಪ್ಪ ಕಿತ್ತೂರ ಹೇಳಿದ್ದಾರೆ.</p>.<p>ಕಾರವಾರ ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ಉಳ್ವೇಕರ್, ದೇವಸ್ಥಾನದ ಪ್ರಧಾನ ಅರ್ಚಕ ಶಂಕರಯ್ಯ ಕಲ್ಮಠ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>