ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ತಾಲ್ಲೂಕು ಪಂಚಾಯ್ತಿ ಸದಸ್ಯ ರವಿ ಹಳದೋಟ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಶಾಂತ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಪಟಗಾರ, ತಾಲ್ಲೂಕು ಕಾರ್ಯದರ್ಶಿ ಸುರೇಶ ಪಟಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಭಜಂತ್ರಿ, ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ, ಪ್ರಮುಖರಾದ ವಸಂತ ಭಂಡಾರಿ, ಎಂ.ಕೆ.ಮೊಗೇರ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸ್ವಾಗತಿಸಿದರು. ಡಿ.ಪಿ.ಹೆಗಡೆ ನಿರೂಪಿಸಿದರು.
ಕ್ರೀಡಾಕೂಟದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಆರು ತಾಲ್ಲೂಕುಗಳ ಸುಮಾರು 700 ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.