ಶಾಲೆಗೆ ಬೀಗ ಹಾಕಲು ಪಾಲಕರು ಮುಂದಾದಾಗ, ಪೊಲೀಸರು ಅದನ್ನು ತಡೆದರು. ಸ್ಥಳಕ್ಕೆ ಭೇಟಿ ನೀಡಿದ ದೈಹಿಕ ಶಿಕ್ಷಣ ಪರಿವೀಕ್ಷಕ ವಸಂತ ಭಂಡಾರಿ ಅವರು, ‘ಶೈಕ್ಷಣಿಕ ತೊಂದರೆ ಆಗದಂತೆ, ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುವಂತೆ ನೋಡಿಕೊಳ್ಳಲಾಗುವುದು. ವಿಷಯವನ್ನು ಕ್ಷೇತ್ರಶಿಕ್ಷಣಾಧಿಕಾರಿ ಗಮನಕ್ಕೆ ತಂದು ಬಗೆಹರಿಸಲಾಗುವುದು’ ಎಂದರು. ಮಾರುಕಟ್ಟೆ ಠಾಣೆ ಪಿಎಸ್ಐ ಶಶಿಕುಮಾರ್, ಪಾಲಕರ ಮನವೊಲಿಸಿ, ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದರು.