ಸಂಘಟನೆ ಪ್ರಮುಖ ಗಂಗಾಧರ ಹೆಗಡೆ ಮಾತನಾಡಿ, ‘ದೇಶದಲ್ಲಿ ರಾಮನಿಗೆ ಮಂದಿರ ಕಟ್ಟಲಾಗದಿದ್ದರೆ ಸಂಸ್ಕೃತಿ ಕಟ್ಟಲಾಗದು. ರಾಮ ಮತ್ತು ಭಾರತ ಬೇರೆ ಬೇರೆಯಲ್ಲ. ಹೀಗಾಗಿ ಎಂತಹ ಸಂದರ್ಭ ಬಂದರೂ ರಾಮ ಮಂದಿರ ನಿರ್ಮಾಣ ಮಾಡಬೇಕು. 490 ವರ್ಷಗಳ ಹಿಂದೆ ವಿಕ್ರಮಾದಿತ್ಯ ಮಹಾರಾಜ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ್ದ. ನಂತರ ಅದನ್ನು ಕೆಡವಿ ಬಾಬರಿ ಮಸೀದಿ ಕಟ್ಟಲಾಗಿತ್ತು. ಆದರೆ, ಹಿಂದೂಗಳ ಆರಾಧ್ಯ ಕ್ಷೇತ್ರವಾದ ಅಯೋಧ್ಯೆಯಲ್ಲಿ ಮಂದಿರದ ಹೊರತಾಗಿ ಮಸೀದಿ ಗಟ್ಟಿಯಾಗಿ ನಿಲ್ಲಲು ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ’ ಎಂದರು. ಪ್ರಮುಖರಾದ ವೆಂಕಟರಮಣ ಹೆಗಡೆ, ಗೋಪಾಲ ದೇವಾಡಿಗ, ಪ್ರಕಾಶ ಸಾಲೇರ, ವಿಠ್ಠಲ ಪೈ ಇದ್ದರು.