<p><strong>ಕಾರವಾರ:</strong> ಯುಪಿಎಸ್ಸಿ ಪರೀಕ್ಷೆಯಲ್ಲಿ ಹೊನ್ನಾವರ ತಾಲ್ಲೂಕಿನ ಮಂಕಿ ಗ್ರಾಮದ ದೀಪಕ್ ಆರ್.ಶೇಟ್ 311ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.</p>.<p>ಆರನೇ ತರಗತಿಯಿಂದ 10ನೇ ತರಗತಿಯವರೆಗೆ ಶಿರಸಿಯ ಮೊರಾರ್ಜಿ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವರು ಶಾಲೆಗೆ ‘ಟಾಪರ್’ ಆಗಿದ್ದರು. ಆ ದಿನಗಳಲ್ಲಿ ಶಾಲಾ ಮಂತ್ರಿ ಮಂಡಲದಲ್ಲಿ ಆಹಾರ ಖಾತೆಯ ಸಚಿವರಾಗಿದ್ದರು. ಅವರಿಗೆ ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ನೆಚ್ಚಿನ ಕ್ರಿಕೆಟರ್ ಆಗಿದ್ದರು ಎಂದು ಸಹಪಾಠಿಗಳು ನೆನಪಿಸಿಕೊಂಡಿದ್ದಾರೆ.</p>.<p><a href="https://www.prajavani.net/india-news/upsc-civil-services-exam-2021-several-people-elected-from-the-state-940890.html" itemprop="url">UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್, ರಾಜ್ಯದ 27 ಜನ ಆಯ್ಕೆ </a></p>.<p>ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪಿ.ಯು. ಅಧ್ಯಯನ ಮಾಡಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡಿದರು. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಅವರು, ಯು.ಪಿ.ಎಸ್.ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಬೆಂಗಳೂರಿನಲ್ಲೇ ತರಬೇತಿಗೆ ಸೇರಿಕೊಂಡರು.</p>.<p>ಅವರ ಕುಟುಂಬವು ಮಂಕಿ ಗ್ರಾಮದಲ್ಲಿದ್ದು, ಚಿನ್ನ ಬೆಳ್ಳಿಯ ವ್ಯಾಪಾರ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಯುಪಿಎಸ್ಸಿ ಪರೀಕ್ಷೆಯಲ್ಲಿ ಹೊನ್ನಾವರ ತಾಲ್ಲೂಕಿನ ಮಂಕಿ ಗ್ರಾಮದ ದೀಪಕ್ ಆರ್.ಶೇಟ್ 311ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.</p>.<p>ಆರನೇ ತರಗತಿಯಿಂದ 10ನೇ ತರಗತಿಯವರೆಗೆ ಶಿರಸಿಯ ಮೊರಾರ್ಜಿ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವರು ಶಾಲೆಗೆ ‘ಟಾಪರ್’ ಆಗಿದ್ದರು. ಆ ದಿನಗಳಲ್ಲಿ ಶಾಲಾ ಮಂತ್ರಿ ಮಂಡಲದಲ್ಲಿ ಆಹಾರ ಖಾತೆಯ ಸಚಿವರಾಗಿದ್ದರು. ಅವರಿಗೆ ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ನೆಚ್ಚಿನ ಕ್ರಿಕೆಟರ್ ಆಗಿದ್ದರು ಎಂದು ಸಹಪಾಠಿಗಳು ನೆನಪಿಸಿಕೊಂಡಿದ್ದಾರೆ.</p>.<p><a href="https://www.prajavani.net/india-news/upsc-civil-services-exam-2021-several-people-elected-from-the-state-940890.html" itemprop="url">UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್, ರಾಜ್ಯದ 27 ಜನ ಆಯ್ಕೆ </a></p>.<p>ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪಿ.ಯು. ಅಧ್ಯಯನ ಮಾಡಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡಿದರು. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಅವರು, ಯು.ಪಿ.ಎಸ್.ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಬೆಂಗಳೂರಿನಲ್ಲೇ ತರಬೇತಿಗೆ ಸೇರಿಕೊಂಡರು.</p>.<p>ಅವರ ಕುಟುಂಬವು ಮಂಕಿ ಗ್ರಾಮದಲ್ಲಿದ್ದು, ಚಿನ್ನ ಬೆಳ್ಳಿಯ ವ್ಯಾಪಾರ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>