ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಬಿಜೆಪಿ ನಾಯಕರು ತನಿಖೆಯ ಹಾದಿಯನ್ನು ತಪ್ಪಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದೇ, ಎಸ್ಡಿಪಿಐ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ನೋಡಿದರೆ, ಇದು ರಾಜಕೀ ಪ್ರೇರಿತವೆನಿಸುತ್ತದೆ. ಅಸ್ಲ್ಂ ಜೊತೆಗಿದ್ದ ಸ್ನೇಹಿತರನ್ನೇ ಬಂಧಿಸಿ, ಅವರನ್ನು ಆರೋಪಿಗಳನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಅಲ್ಲದೇ, ಎಸ್ಡಿಪಿಐ ಕಾರ್ಯಕರ್ತರನ್ನು ಭಯೋತ್ಪಾದಕರಂತೆ ಚಿತ್ರಿಸಲಾಗುತ್ತಿದೆ. ಪಕ್ಷದ ಇಬ್ಬರು ಪದಾಧಿಕಾರಿಗಳನ್ನು ಬಂಧಿಸಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದರು.