ಮಹಾಮಂಡಳದ ಕಾರ್ಯಾಧ್ಯಕ್ಷ ಡಾ.ವೆಂಕಟೇಶ ನಾಯ್ಕ ಮಾತನಾಡಿ, ‘ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಹಾಗೂ ಆಡಳಿತಾಧಿಕಾರಿ ನೇಮಕ ಮಾಡುವ ಮೂಲಕ ಹಿಂದೂ ಧಾರ್ಮಿಕ ದೇವಾಲಯಗಳ ಮೇಲೆ ಹಿಡಿತ ಸಾಧಿಸುವ ಕ್ರಮ ಸರಿಯಲ್ಲ. ಈ ಬಗ್ಗೆ
ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮನವಿಯನ್ನು ಪುರಸ್ಕರಿಸಿದ ಹಿಂದಿನ ಸರ್ಕಾರ ಹೈಕೋರ್ಟ್ ತೀರ್ಮಾನ ಬರುವವರೆಗೆ ರಾಜ್ಯದ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವ ಹಾಗೂ ಆಡಳಿತಾಧಿಕಾರಿ ನೇಮಕ ಮಾಡುವ ಕ್ರಮವನ್ನು ಕೈಬಿಟ್ಟಿತ್ತು. ಹೀಗಿರುವಾಗ ಹೈಕೋರ್ಟ್ ತೀರ್ಪಿಗೆ ಸುಪ್ರಿಂ ಕೋರ್ಟ್ನಿಂದ ತಡೆಯಾಜ್ಞೆ ಪಡೆದು, ತರಾತುರಿಯಲ್ಲಿ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗುತ್ತಿದೆ’ ಎಂದರು.