ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಧನಸಹಾಯ ಜಮಾ ಮಾಡಿ

ಕಾರ್ಮಿಕರ ಒತ್ತಾಯ
Last Updated 8 ಮೇ 2020, 14:48 IST
ಅಕ್ಷರ ಗಾತ್ರ

ಶಿರಸಿ: ಲಾಕ್‌ಡೌನ್‌ನಿಂದ ತೊಂದರೆಯಲ್ಲಿರುವ ಕಾರ್ಮಿಕರಿಗೆ ಸರ್ಕಾರ ನೀಡಲು ನಿರ್ಧರಿಸಿರುವ ಧನಸಹಾಯವನ್ನು ಶೀಘ್ರದಲ್ಲಿ ಅವರ ಖಾತೆಗೆ ಜಮಾ ಮಾಡಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳು ಒತ್ತಾಯಿಸಿವೆ.

ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಪ್ರಮುಖರು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಶುಕ್ರವಾರ ಇಲ್ಲಿ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರಿಗೆ ನೀಡಲಾಯಿತು.

ಜಿಲ್ಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆ ಅಡಿಯಲ್ಲಿ 55ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇದ್ದಾರೆ. 46 ದಿನಗಳ ಲಾಕ್‌ಡೌನ್‌ನಿಂದ ಕಾರ್ಮಿಕರಿಗೆ ದುಡಿಯಲು ಅವಕಾಶವಾಗಿಲ್ಲ. ಸರ್ಕಾರ ಏಪ್ರಿಲ್ 4ರಂದು ಈ ಕಾರ್ಮಿಕರಿಗೆ ಧನಸಹಾಯ ನೀಡುವುದಾಗಿ ಘೋಷಿಸಿತ್ತು. ಈ ಸಂಬಂಧ ಕಾರ್ಮಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ, ಈವರೆಗೂ ಕಾರ್ಮಿಕರಿಗೆ ಹಣ ಸಂದಾಯವಾಗಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ, ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ ನಾಯ್ಕ, ಅಶೋಕ ಪಡ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT