ಜಿಲ್ಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆ ಅಡಿಯಲ್ಲಿ 55ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇದ್ದಾರೆ. 46 ದಿನಗಳ ಲಾಕ್ಡೌನ್ನಿಂದ ಕಾರ್ಮಿಕರಿಗೆ ದುಡಿಯಲು ಅವಕಾಶವಾಗಿಲ್ಲ. ಸರ್ಕಾರ ಏಪ್ರಿಲ್ 4ರಂದು ಈ ಕಾರ್ಮಿಕರಿಗೆ ಧನಸಹಾಯ ನೀಡುವುದಾಗಿ ಘೋಷಿಸಿತ್ತು. ಈ ಸಂಬಂಧ ಕಾರ್ಮಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ, ಈವರೆಗೂ ಕಾರ್ಮಿಕರಿಗೆ ಹಣ ಸಂದಾಯವಾಗಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.