<p><strong>ಶಿರಸಿ</strong>: ಲಾಕ್ಡೌನ್ನಿಂದ ತೊಂದರೆಯಲ್ಲಿರುವ ಕಾರ್ಮಿಕರಿಗೆ ಸರ್ಕಾರ ನೀಡಲು ನಿರ್ಧರಿಸಿರುವ ಧನಸಹಾಯವನ್ನು ಶೀಘ್ರದಲ್ಲಿ ಅವರ ಖಾತೆಗೆ ಜಮಾ ಮಾಡಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳು ಒತ್ತಾಯಿಸಿವೆ.</p>.<p>ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಪ್ರಮುಖರು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಶುಕ್ರವಾರ ಇಲ್ಲಿ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರಿಗೆ ನೀಡಲಾಯಿತು.</p>.<p>ಜಿಲ್ಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆ ಅಡಿಯಲ್ಲಿ 55ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇದ್ದಾರೆ. 46 ದಿನಗಳ ಲಾಕ್ಡೌನ್ನಿಂದ ಕಾರ್ಮಿಕರಿಗೆ ದುಡಿಯಲು ಅವಕಾಶವಾಗಿಲ್ಲ. ಸರ್ಕಾರ ಏಪ್ರಿಲ್ 4ರಂದು ಈ ಕಾರ್ಮಿಕರಿಗೆ ಧನಸಹಾಯ ನೀಡುವುದಾಗಿ ಘೋಷಿಸಿತ್ತು. ಈ ಸಂಬಂಧ ಕಾರ್ಮಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ, ಈವರೆಗೂ ಕಾರ್ಮಿಕರಿಗೆ ಹಣ ಸಂದಾಯವಾಗಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.</p>.<p>ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ, ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ ನಾಯ್ಕ, ಅಶೋಕ ಪಡ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಲಾಕ್ಡೌನ್ನಿಂದ ತೊಂದರೆಯಲ್ಲಿರುವ ಕಾರ್ಮಿಕರಿಗೆ ಸರ್ಕಾರ ನೀಡಲು ನಿರ್ಧರಿಸಿರುವ ಧನಸಹಾಯವನ್ನು ಶೀಘ್ರದಲ್ಲಿ ಅವರ ಖಾತೆಗೆ ಜಮಾ ಮಾಡಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳು ಒತ್ತಾಯಿಸಿವೆ.</p>.<p>ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಪ್ರಮುಖರು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಶುಕ್ರವಾರ ಇಲ್ಲಿ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರಿಗೆ ನೀಡಲಾಯಿತು.</p>.<p>ಜಿಲ್ಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆ ಅಡಿಯಲ್ಲಿ 55ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇದ್ದಾರೆ. 46 ದಿನಗಳ ಲಾಕ್ಡೌನ್ನಿಂದ ಕಾರ್ಮಿಕರಿಗೆ ದುಡಿಯಲು ಅವಕಾಶವಾಗಿಲ್ಲ. ಸರ್ಕಾರ ಏಪ್ರಿಲ್ 4ರಂದು ಈ ಕಾರ್ಮಿಕರಿಗೆ ಧನಸಹಾಯ ನೀಡುವುದಾಗಿ ಘೋಷಿಸಿತ್ತು. ಈ ಸಂಬಂಧ ಕಾರ್ಮಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ, ಈವರೆಗೂ ಕಾರ್ಮಿಕರಿಗೆ ಹಣ ಸಂದಾಯವಾಗಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.</p>.<p>ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ, ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ ನಾಯ್ಕ, ಅಶೋಕ ಪಡ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>